ADVERTISEMENT

ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನ: ದರೋಡೆಕೋರನ ಮೇಲೆ ಗುಂಡು ಹಾರಿಸಿ ಬಂಧನ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2024, 16:29 IST
Last Updated 31 ಆಗಸ್ಟ್ 2024, 16:29 IST
<div class="paragraphs"><p>ಬಂಧನ </p></div>

ಬಂಧನ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ನೆಲಮಂಗಲ ತಾಲ್ಲೂಕಿನ ದಾಬಸ್​ಪೇಟೆ ಬಳಿಯ ಹೆದ್ದಾರಿಯಲ್ಲಿ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ದರೋಡೆಕೋರನ ಮೇಲೆ ಗುಂಡು ಹಾರಿಸಿ ಬಂಧಿಸಲಾಗಿದೆ.

ADVERTISEMENT

ಜಯಂತ್‌ ಅಲಿಯಾಸ್‌ ಬ್ಯಾಟರಿ ಜಯಂತ್‌ ಬಂಧಿತ ರೌಡಿಶೀಟರ್‌. ಮಾಗಡಿ ತಾಲ್ಲೂಕಿನ ಆಲೂರು ಗ್ರಾಮದ ನಿವಾಸಿ.

ಹೆದ್ಧಾರಿಯ ಕಂಬಾಳು ಗ್ರಾಮದ ಬಳಿ ದಾಬಸ್​ಪೇಟೆ ಠಾಣೆಯ​ ಇನ್ಸ್​​ಪೆಕ್ಟರ್‌ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಲು ಯಶಸ್ವಿ ಆಗಿದ್ದಾರೆ. ಆರೋಪಿಗೆ ದಾಬಸ್‌ಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

‘ಆರೋಪಿ ಬೈಕ್​ನಲ್ಲಿ ಬಂದು ಹೆದ್ದಾರಿಯಲ್ಲಿ ದರೋಡೆ ನಡೆಸುತ್ತಿದ್ದ. ಈತನ ವಿರುದ್ಧ ಕೊಲೆ, ಕೊಲೆ ಯತ್ನ, ದರೋಡೆ ಸೇರಿ 56 ಪ್ರಕರಣಗಳು ದಾಖಲಾಗಿದ್ದವು. ಶನಿವಾರ ಸಂಜೆ ದರೋಡೆಗೆ ಹೊಂಚು ಹಾಕುತ್ತಿದ್ದ. ಖಚಿತ ಮಾಹಿತಿ ಆಧರಿಸಿ, ದಾಬಸ್‌ಪೇಟೆ ಠಾಣೆ ಪೊಲೀಸರು ಕಾರ್ಯಾಚರಣೆಗೆ ಮುಂದಾಗಿದ್ದರು. ಬಂಧಿಸಲು ತೆರಳಿದ್ದ ವೇಳೆ ಹೆಡ್‌ ಕಾನ್‌ಸ್ಟೆಬಲ್‌ ಇಮ್ರಾನ್ ಪಾಷಾ ಅವರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಇನ್‌ಸ್ಪೆಕ್ಟರ್‌ ಬಿ.ರಾಜು ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದರು’ ಎಂದು ಮೂಲಗಳು ತಿಳಿಸಿವೆ.

2019ರಲ್ಲೂ ಆರೋಪಿ ಮೇಲೆ ಗುಂಡು ಹಾರಿಸಿ ಬಂಧಿಸಲಾಗಿತ್ತು. ಜಾಮೀನನ ಮೇಲೆ ಬಿಡುಗಡೆಯಾಗಿ ಮತ್ತೆ ದರೋಡೆ ನಡೆಸುತ್ತಿದ್ದ ಎಂದು ಪೊಲೀಸರು ಹೇಳಿದರು. ದಾಬಸ್​ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.