ADVERTISEMENT

ಯುವಕನ ನಗ್ನಗೊಳಿಸಿ ಹಲ್ಲೆ ಪ್ರಕರಣ: ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಬಂಧನ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2024, 3:17 IST
Last Updated 17 ಸೆಪ್ಟೆಂಬರ್ 2024, 3:17 IST
   

ಬೆಂಗಳೂರು: ಪೊಲೀಸರಿಗೆ ಮಾಹಿತಿ ನೀಡಿದ್ದ ಎಂಬ ಕಾರಣಕ್ಕೆ ಯುವಕನನ್ನು ನಗ್ನಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣ‌‌ ಸಂಬಂಧ ರೌಡಿಶೀಟರ್ ಪವನ್ ಗೌಡ ಅಲಿಯಾಸ್ ಕಡುಬು ಎಂಬಾತನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಮಂಗಳವಾರ ಮುಂಜಾನೆ ಬಂಧಿಸಿದ್ದಾರೆ.

ಕೆಂಗೇರಿ ಬಳಿಯ ಉಲ್ಲಾಳದಲ್ಲಿ ಪವನ್ ಗೌಡ ಇದ್ದ ಖಚಿತ ‌ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ಆಗ ಆರೋಪಿ ಪವನ್ ‌ಪೊಲೀಸರ ಮೇಲೆಯೇ‌‌ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ. ಆಗ ಆತ್ಮರಕ್ಷಣೆಗಾಗಿ ಪೊಲೀಸರು ‌ರೌಡಿ ಮೇಲೆ ಗುಂಡು ಹಾರಿಸಿದರು. ಪವನ್ ಕಾಲಿಗೆ ಗುಂಡೇಟು ಬಿದ್ದು ಗಾಯ ವಾಗಿದೆ. ಘಟನೆಯಲ್ಲಿ ಕಾನ್‌ಸ್ಟೆಬಲ್ ವೆಂಕಟೇಶ್ ಅವರಿಗೂ ಗಾಯವಾಗಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT