ADVERTISEMENT

ಬೆಂಗಳೂರು: ‘ಸಂಸ್ಕೃತಿ ಸಂಗಮ’ ಪ್ರಶಸ್ತಿಗೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2024, 16:16 IST
Last Updated 16 ಅಕ್ಟೋಬರ್ 2024, 16:16 IST
ಬಸವರಾಜ ಸಬರದ
ಬಸವರಾಜ ಸಬರದ   

ಬೆಂಗಳೂರು: ಡಾ.ಸಿ. ಸೋಮಶೇಖರ-ಎನ್. ಸರ್ವಮಂಗಳಾ ಸಾಹಿತ್ಯ ಸೇವಾ ಪ್ರತಿಷ್ಠಾನ ನೀಡುವ ‘ಸಂಸ್ಕೃತಿ ಸಂಗಮ–2024’ ಪ್ರಶಸ್ತಿಗೆ ಬಸವರಾಜ ಸಬರದ (ವಚನ ಸಾಹಿತ್ಯ), ಕೃಷ್ಣ ಕೊಲ್ಹಾರ ಕುಲಕರ್ಣಿ (ದಾಸ ಸಾಹಿತ್ಯ), ಬಸವರಾಜ ನೆಲ್ಲಿಸರ (ಜಾನಪದ ಸಾಹಿತ್ಯ), ಜಯದೇವಿ ಜಂಗಮಶೆಟ್ಟಿ (ಸಂಗೀತ ಕ್ಷೇತ್ರ) ಆಯ್ಕೆಯಾಗಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಸಿ. ಸೋಮಶೇಖರ, ‘ಅಕ್ಟೋಬರ್‌ 20ರಂದು (ಭಾನುವಾರ) ನಗರದ ಗಾಂಧಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು ತಲಾ ₹10 ಸಾವಿರ ನಗದು, ಪ್ರಶಸ್ತಿ ಫಲಕ ಮತ್ತು ಸರಸ್ವತಿ ವಿಗ್ರಹ ಒಳಗೊಂಡಿದೆ’ ಎಂದು ಮಾಹಿತಿ ನೀಡಿದರು.

‘ಚಲನಚಿತ್ರ ನಿರ್ದೇಶಕ ಟಿ.ಎನ್. ಸೀತಾರಾಂ ಅವರು ‘ಸಂಸ್ಕೃತಿ ಸಂಗಮ’ ವಿಶೇಷ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಬೆಳಗಾವಿಯ ನಾಗನೂರು ರುದ್ರಾಕ್ಷಿಮಠದ ಅಲ್ಲಮಪ್ರಭು ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಸಾಹಿತಿ ಹಂ.ಪ. ನಾಗರಾಜಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ತಿಳಿಸಿದರು.

ADVERTISEMENT
ಕೃಷ್ಣ ಕೊಲ್ಹಾರ ಕುಲಕರ್ಣಿ
ಬಸವರಾಜ ನೆಲ್ಲಿಸರ
ಜಯದೇವಿ ಜಂಗಮಶೆಟ್ಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.