ಬೆಂಗಳೂರು: ‘ಒಳಮೀಸಲಾತಿ ಬಗ್ಗೆ ಮಾತನಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇಲ್ಲ’ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ ತಿರುಗೇಟು ನೀಡಿದ್ದಾರೆ.
‘ಒಳ ಮೀಸಲಾತಿಗಾಗಿ ಪರಿಶಿಷ್ಟ ಜಾತಿ ಸಮುದಾಯದವರು ದಶಕಗಳಿಂದ ಹೋರಾಟ ನಡೆಸಿದ್ದಾರೆ. 2018ರಲ್ಲೇ ಒಳಮೀಸಲಾತಿ ನೀಡಲು ಸುವರ್ಣಾವಕಾಶ ಇತ್ತು. ನಿರಂತರ ಒತ್ತಡ ಹೇರಿದ್ದರೂ ಸಿದ್ದರಾಮಯ್ಯ ತೀರ್ಮಾನ ಕೈಗೊಳ್ಳದೆ ಜಾರಿಕೊಂಡಿದ್ದರು. ಒಳಮೀಸಲಾತಿ ಜಾರಿಗೆ ಬದ್ಧತೆ ತೋರಿದ್ದು ಬಿಜೆಪಿ ಸರ್ಕಾರ’ ಎಂದು ಸಮರ್ಥಿಸಿಕೊಂಡಿದ್ದಾರೆ.
‘ಸುಪ್ರೀಂಕೋರ್ಟ್ನ ಐವರು ನ್ಯಾಯಮೂರ್ತಿಗಳ ಪೀಠವು ಪರಿಶಿಷ್ಟ ಜಾತಿಯ ಉಪ ವರ್ಗೀಕರಣದ ವಿಷಯವನ್ನು ಏಳು ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆ ಮಾಡಬೇಕೆಂದು ಮುಖ್ಯ ನ್ಯಾಯಮೂರ್ತಿಗೆ ವರ್ಷಗಳ ಹಿಂದೆಯೇ ಕೋರಲಾಗಿದೆ’ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.