ಬೆಂಗಳೂರು: ಕೆಎಸ್ಆರ್ಟಿಸಿ ಬಸ್ಗಳಲ್ಲಿ ಜುಲೈ ತಿಂಗಳಲ್ಲಿ ಟಿಕೆಟ್ ಪಡೆಯದೇ ಪ್ರಯಾಣಿಸುತ್ತಿದ್ದ 3,695 ಪ್ರಯಾಣಿಕರಿಂದ ₹ 6.03 ಲಕ್ಷ ದಂಡ ವಸೂಲಿ ಮಾಡಲಾಗಿದೆ.
ಕೆಎಸ್ಆರ್ಟಿಸಿ ತನಿಖಾ ತಂಡದಲ್ಲಿನ ಅಧಿಕಾರಿಗಳು ಜುಲೈಯಲ್ಲಿ 44,879 ಬಸ್ಗಳಲ್ಲಿ ತಪಾಸಣೆ ನಡೆಸಿದ್ದರು. ನಿಗಮದ ಆದಾಯದಲ್ಲಿ ₹ 83,747 ಸೋರಿಕೆ ಪತ್ತೆಯಾಗಿತ್ತು. ಅದನ್ನು ದಂಡ ಸಹಿತ ವಸೂಲಿ ಮಾಡಲಾಗಿದೆ. ಪ್ರಯಾಣಿಕರು ಟಿಕೆಟ್ ಅಥವಾ ಬಸ್ ಪಾಸ್ ಪಡೆದು ಪ್ರಯಾಣಿಸಬೇಕು ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.