ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸರಸ್ತೆ ಹಾಗೂ ಚನ್ನಕೇಶನಗರದಲ್ಲಿ ಮೇ 11ರಂದು ಊರು ಹಬ್ಬದ ಅಂಗವಾಗಿ ನಡೆಯುವ ರಥೋತ್ಸವ, ಕರಗ, ಪಲ್ಲಕ್ಕಿ ಉತ್ಸವಕ್ಕೆ ಹೆಚ್ಚಿನ ಭಕ್ತರು ಬರುವ ನಿರೀಕ್ಷೆಯಿದ್ದು ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಸುಗಮ ಸಂಚಾರ ಕಲ್ಪಿಸುವ ಉದ್ದೇಶದಿಂದ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.
ರಾಯಸಂದ್ರ ಜಂಕ್ಷನ್ ಕಡೆಯಿಂದ ಕೂಡ್ಲುಗೇಟ್ ಕಡೆಗೆ ಸಂಚರಿಸುವ ವಾಹನಗಳು ಚೂಡಸಂದ್ರ, ಬಿರ್ಲಾ ಜಂಕ್ಷನ್ ಮೂಲಕ ಕೂಡ್ಲುಗೇಟ್ ಕಡೆಗೆ ತೆರಳಬೇಕು. ರಾಯಸಂದ್ರ ಜಂಕ್ಷನ್ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಸಂಚರಿಸುವ ವಾಹನಗಳು ಒಲ್ಡ್ ಆರ್ಟಿಒ ಜಂಕ್ಷನ್ನಿಂದ ದೊಡ್ಡನಾಗಮಂಗಲ ಮೂಲಕ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಸಂಚರಿಸಬಹುದು. ನಾಗನಾಥಪುರ ಜಂಕ್ಷನ್ ಕಡೆಯಿಂದ ರಾಯಸಂದ್ರ ಕಡೆಗೆ ಸಂಚರಿಸುವ ವಾಹನಗಳು ಕೂಡ್ಲುಗೇಟ್ ಜಂಕ್ಷನ್ನಿಂದ ಕೂಡ್ಲುರಸ್ತೆ, ಬಿರ್ಲಾ ಜಂಕ್ಷನ್, ಚೂಡಸಂದ್ರ ಜಂಕ್ಷನ್ ಮೂಲಕ ರಾಯಸಂದ್ರ ಕಡೆಗೆ ಸಂಚರಿಸಬಹುದು.
ಹೊಸೂರು ರಸ್ತೆ ಕಡೆಯಿಂದ ಜೈಲು ರಸ್ತೆ, ರಾಯಸಂದ್ರ ರಸ್ತೆಯ ಕಡೆಗೆ ಸಂಚರಿಸುವ ವಾಹನಗಳು, ಎಲೆಕ್ಟ್ರಾನಿಕ್ ಸಿಟಿ 2ನೇ ಹಂತದಿಂದ ದೊಡ್ಡ ನಾಗಮಂಗಲ, ಓಲ್ಡ್ ಆರ್ಟಿಒ ಜಂಕ್ಷನ್ ಮೂಲಕ ಸಂಚರಿಸಬಹುದು ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.