ADVERTISEMENT

ಜುಲೈ 29ರಿಂದ ರೈಲು ಸಂಚಾರ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 19 ಜುಲೈ 2024, 19:52 IST
Last Updated 19 ಜುಲೈ 2024, 19:52 IST
ರೈಲು
ರೈಲು   

ಬೆಂಗಳೂರು: ಬೆಂಗಳೂರು ಯಾರ್ಡ್ ಸೇತುವೆ ಮತ್ತು ಬೆಂಗಳೂರು ಕಂಟೋನ್ಮೆಂಟ್-ಕೆಎಸ್ಆರ್ ಬೆಂಗಳೂರು ಮಧ್ಯದಲ್ಲಿರುವ ಸೇತುವೆಗಳ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 29ರಿಂದ ರೈಲು ಸಂಚಾರ ವ್ಯತ್ಯಯವಾಗಲಿದೆ.

ಜುಲೈ 30, ಆಗಸ್ಟ್ 6 ಮತ್ತು 13ರಂದು ಕೆಎಸ್ಆರ್ ಬೆಂಗಳೂರು-ಎಂಜಿಆರ್ ಚೆನ್ನೈ ಸೆಂಟ್ರಲ್ ಡೈಲಿ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಜುಲೈ 31, ಆಗಸ್ಟ್ 7 ಮತ್ತು 14 ರಂದು ಎಂಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್ಆರ್ ಬೆಂಗಳೂರು ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ.

ಜುಲೈ 30, ಆಗಸ್ಟ್ 6 ಮತ್ತು 13ರಂದು ಎಂಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್ಆರ್ ಬೆಂಗಳೂರು ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ವೈಟ್ ಫೀಲ್ಡ್-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ, ನಾಂದೇಡ್-ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್ ರೈಲು ಯಲಹಂಕ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ, ಎಸ್ಎಸ್ಎಸ್ ಹುಬ್ಬಳ್ಳಿ-ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್ ರೈಲು ಯಶವಂತಪುರ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಹಾಗೂ ಹೊಸಪೇಟೆ-ಕೆಎಸ್ಆರ್ ಬೆಂಗಳೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಯಶವಂತಪುರ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿವೆ.

ADVERTISEMENT

ಜುಲೈ 31, ಆಗಸ್ಟ್ 7 ಮತ್ತು 14 ರಂದು ಕೆಎಸ್ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್‌ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು-ಯಶವಂತಪುರ ನಿಲ್ದಾಣಗಳ ನಡುವೆ, ಕೆಎಸ್ಆರ್ ಬೆಂಗಳೂರು-ಹೊಸಪೇಟೆ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಕೆಎಸ್ಆರ್ ಬೆಂಗಳೂರು-ಯಶವಂತಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿವೆ. ಈ ರೈಲುಗಳು ಯಶವಂತಪುರ ನಿಲ್ದಾಣದಿಂದ ನಿಗದಿತ ಸಮಯದಲ್ಲಿ ಪ್ರಾರಂಭವಾಗಲಿವೆ.

ಜುಲೈ 29, ಆಗಸ್ಟ್ 5 ಮತ್ತು 12ರಂದು ಲೋಕಮಾನ್ಯ ತಿಲಕ್ ಟರ್ಮಿನಸ್-ಕೊಯಮತ್ತೂರು ಡೈಲಿ ಎಕ್ಸ್ ಪ್ರೆಸ್ ರೈಲು ಗೌರಿಬಿದನೂರು, ಬೈಯಪ್ಪನಹಳ್ಳಿ, ಎಸ್ಎಂವಿಟಿ ಬೆಂಗಳೂರು, ಬೈಯಪ್ಪನಹಳ್ಳಿ, ಹೊಸೂರು ಮಾರ್ಗದ ಮೂಲಕ ಸಂಚರಿಸಲಿದೆ. ಬೆಂಗಳೂರು ಪೂರ್ವ, ಬೆಂಗಳೂರು ಕಂಟೋನ್ಮೆಂಟ್, ಕೆಎಸ್ಆರ್ ಬೆಂಗಳೂರು ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ. ಬೆಂಗಳೂರಿನ ಎಸ್ಎಂವಿಟಿಯಲ್ಲಿ ಹೆಚ್ಚುವರಿ ನಿಲುಗಡೆ ಇರಲಿದೆ.

ಜುಲೈ 30, ಆಗಸ್ಟ್ 6 ಮತ್ತು 13 ರಂದು ಎಸ್ಎಂವಿಟಿ ಬೆಂಗಳೂರು-ಮೈಸೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಎಸ್ಎಂವಿಟಿ ಬೆಂಗಳೂರು, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಬೆಂಗಳೂರು ಕ್ಯಾಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ. ಮೈಸೂರು-ಎಸ್ಎಂವಿಟಿ ಬೆಂಗಳೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ, ಹೆಬ್ಬಾಳ, ಬಾಣಸವಾಡಿ, ಎಸ್ಎಂವಿಟಿ ಬೆಂಗಳೂರು ಮೂಲಕ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್‌ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

ಕೆಎಸ್ಆರ್ ಬೆಂಗಳೂರು-ನಾಂದೇಡ್ ಡೈಲಿ ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ, ಯಲಹಂಕ ಮಾರ್ಗದ ಮೂಲಕ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

ಬಂಗಾರಪೇಟೆ-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ ರೈಲು ಕೃಷ್ಣರಾಜಪುರ, ಬೈಯಪ್ಪನಹಳ್ಳಿ, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

ಮೈಸೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ಕಾವೇರಿ ಡೈಲಿ ಎಕ್ಸ್‌ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ, ಹೆಬ್ಬಾಳ, ಬಾಣಸವಾಡಿ, ಬೈಯಪ್ಪನಹಳ್ಳಿ, ಕೃಷ್ಣರಾಜಪುರ ಮಾರ್ಗವಾಗಿ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

ಎಂಜಿಆರ್ ಚೆನ್ನೈ ಸೆಂಟ್ರಲ್-ಮೈಸೂರು ಕಾವೇರಿ ಡೈಲಿ ಎಕ್ಸ್ ಪ್ರೆಸ್ ರೈಲು ಕೃಷ್ಣರಾಜಪುರ, ಬೈಯಪ್ಪನಹಳ್ಳಿ, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

ಜುಲೈ 30, ಆಗಸ್ಟ್ 6 ಮತ್ತು 13ರಂದು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್-ಕೆಎಸ್ಆರ್ ಬೆಂಗಳೂರು ಉದ್ಯಾನ್ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯೆ 5 ನಿಮಿಷ, ಮೈಲಾಡುತುರೈ-ಮೈಸೂರು ಎಕ್ಸ್‌ಪ್ರೆಸ್ ರೈಲು ಮಾರ್ಗ ಮಧ್ಯೆ 45 ನಿಮಿಷ, ತಿರುಪತಿ-ಚಾಮರಾಜನಗರ ಎಕ್ಸ್‌ಪ್ರೆಸ್ ರೈಲು ಮಾರ್ಗಮಧ್ಯೆ 100 ನಿಮಿಷ ನಿಯಂತ್ರಿಸಲಾಗುತ್ತದೆ ಎಂದು ನೈರುತ್ಯ ರೈಲ್ವೆ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.