ADVERTISEMENT

ಅಪಘಾತ | ಒಂದೇ ಬೈಕ್‌ನಲ್ಲಿ ಮೂವರ ಪ್ರಯಾಣ: ಒಬ್ಬನ ಸಾವು

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2024, 13:59 IST
Last Updated 2 ಸೆಪ್ಟೆಂಬರ್ 2024, 13:59 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಕೃಷ್ಣರಾಜೇಂದ್ರ ಮಾರುಕಟ್ಟೆಯ ಬಿಜಿಎಸ್‌ ಮೇಲ್ಸೇತುವೆಯಲ್ಲಿ ಜಾಮಿಯಾ ಮಸೀದಿ ಎದುರು ನಡೆದ ಅಪಘಾತದಲ್ಲಿ ಬೈಕ್‌ ಮಧ್ಯದಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಹಿಂಬದಿ ಸವಾರ ಗಾಯಗೊಂಡಿದ್ದಾರೆ.

ADVERTISEMENT

ಮೊಹಮ್ಮದ್‌ ನೌಹಿದುರ್‌ ರೆಹಮಾನ್‌(19) ಮೃತಪಟ್ಟವರು.

ಅಮೀರ್‌ ಫಸಿ(19) ಅವರಿಗೆ ಗಾಯವಾಗಿದ್ದು, ಬೈಕ್‌ ಸವಾರ ಮೊಹಮ್ಮದ್‌ ಶೋಯೆಬ್‌ ಅಪಾಯದಿಂದ ಪಾರಾಗಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.

‘ಶನಿವಾರ ರಾತ್ರಿ 8.30ರ ಸುಮಾರಿಗೆ ಒಂದೇ ಬೈಕ್‌ನಲ್ಲಿ ಮೂವರು ತೆರಳುತ್ತಿದ್ದರು. ಮೊಹಮ್ಮದ್‌ ಉಲ್ಲಾಖಾನ್ ಅವರು ಬೈಕ್‌ ಚಲಾಯಿಸುತ್ತಿದ್ದರು. ಜಾಮಿಯಾ ಮಸೀದಿ ಎದುರು ದ್ವಿಚಕ್ರ ವಾಹನವನ್ನು ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದರು. ಮುಂದೆ ತೆರಳುತ್ತಿದ್ದ ಆಟೊಗೆ ಡಿಕ್ಕಿಯಾದ ಪರಿಣಾಮ ರೆಹಮಾನ್‌ ಅವರಿಗೆ ತಲೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯವಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಅವರು ಭಾನುವಾರ ಮೃತಪಟ್ಟಿದ್ದಾರೆ’ ಎಂದು ಸಂಚಾರ ವಿಭಾಗದ ಪೊಲೀಸರು ಹೇಳಿದರು.

ಸಿಟಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.