ADVERTISEMENT

Karnataka Rains: ರಾಜ್ಯದ 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’

​ಪ್ರಜಾವಾಣಿ ವಾರ್ತೆ
Published 13 ಜುಲೈ 2024, 16:05 IST
Last Updated 13 ಜುಲೈ 2024, 16:05 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ರಾಜ್ಯದ ವಿವಿಧೆಡೆ ಭಾನುವಾರವೂ ಭಾರಿ ಗಾಳಿ–ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಐದು ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್’ ಘೋಷಿಸಲಾಗಿದೆ. 

ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ‘ರೆಡ್ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರಾ ಮಳೆಯಾಗುವ ಸಾಧ್ಯತೆಯಿದೆ. ಹಾಸನ ಹಾಗೂ ಕೊಡಗು ಜಿಲ್ಲೆಗೆ ‘ಆರೆಂಜ್ ಅಲರ್ಟ್’, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬೆಳಗಾವಿ, ಧಾರವಾಡ, ಹಾವೇರಿ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿಯೂ ಭಾರಿ ಮಳೆಯ ಜತೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. 

ADVERTISEMENT

ಕರಾವಳಿ ಉದ್ದಕ್ಕೂ ಬಿರುಗಾಳಿಯ ಆರ್ಭಟ ಹೆಚ್ಚಿರುವ ಸಾಧ್ಯತೆಯಿದೆ. ಗಂಟೆಗೆ 35 ಕಿ.ಮೀ.ಯಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಸಮುದ್ರದಲ್ಲಿ ಭಾರಿ ಅಲೆಗಳು ಕಾಣಿಸಿಕೊಳ್ಳಬಹುದು. ಆದ್ದರಿಂದ, ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರ ವಹಿಸಬೇಕು. ಸಮುದ್ರದ ದಡದಲ್ಲಿ ಮನೋರಂಜನಾ ಚಟುವಟಿಕೆಗಳನ್ನು ನಡೆಸುವಾಗ ಮುನ್ನೆಚ್ಚರಿಕೆ ವಹಿಸಬೇಕು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಸೋಮವಾರವೂ ಕೆಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಮೂರು ಜಿಲ್ಲೆಗಳು ಸೇರಿ ಐದು ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್’ ನೀಡಲಾಗಿದೆ. ಇದೇ 17ರವರೆಗೂ ಕರಾವಳಿ ಸೇರಿ ರಾಜ್ಯದ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.