ಬಸವಕಲ್ಯಾಣ: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿನ ಮಹಾರಾಷ್ಟ್ರ ಗಡಿಯ ಚೆಕ್ ಪೋಸ್ಟ್ನಲ್ಲಿ ಬುಧವಾರ ಅನಧಿಕೃತವಾಗಿ ಸಾಗಿಸುತ್ತಿದ್ದ ₹2,40,000 ಮೌಲ್ಯದ 1200 ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ನಾಸೀರ್ ಖಾನ್ ಎನ್ನುವವರು ಸೊಲ್ಲಾಪುರದಿಂದ ಬೀದರ್ಗೆ ಸೀರೆಗಳನ್ನು ತೆಗೆದುಕೊಂಡು ಹೋಗುತ್ತಿದ್ದರು. ಲೋಕಸಭೆ ಚುನಾವಣೆ ನಿಮಿತ್ತವಾಗಿ ವಾಹನ ತಪಾಸಣೆ ನಡೆಸಿದಾಗ ಸೀರೆಗಳು ಪತ್ತೆಯಾಗಿವೆ. ಕಣ್ಗಾವಲು ಸಮಿತಿಯ ಸಂತೋಷಕುಮಾರ ಚವಾಣ, ಸಬ್ಇನ್ಸ್ಟೆಕ್ಟರ್ ಬಸವರಾಜ್ ಜಾಮಗೊಂಡ, ಆನಂದ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.