ADVERTISEMENT

ಕೌಡಗಾಂವ್: ಬಗೆ ಹರಿಯದ ವಿವಾದ, ಹೆಚ್ಚುವರಿ ಪೊಲೀಸ್ ಬಂದೋಬಸ್ತ್ 

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2024, 16:11 IST
Last Updated 5 ಫೆಬ್ರುವರಿ 2024, 16:11 IST
ಔರಾದ್ ತಾಲ್ಲೂಕಿನ ಕೌಡಗಾಂವ್ ಗ್ರಾಮಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ ಮೇಘಣ್ಣನವರ್, ಉಪ ವಿಭಾಗಾಧಿಕಾರಿ ಲವೀಶ್ ಒರ್ಡಿಯಾ ಭೇಟಿ ನೀಡಿ ಸ್ಥಳೀಯರ ಜತೆ ಚರ್ಚಿಸಿದರು
ಔರಾದ್ ತಾಲ್ಲೂಕಿನ ಕೌಡಗಾಂವ್ ಗ್ರಾಮಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ ಮೇಘಣ್ಣನವರ್, ಉಪ ವಿಭಾಗಾಧಿಕಾರಿ ಲವೀಶ್ ಒರ್ಡಿಯಾ ಭೇಟಿ ನೀಡಿ ಸ್ಥಳೀಯರ ಜತೆ ಚರ್ಚಿಸಿದರು   

ಔರಾದ್: ತಾಲ್ಲೂಕಿನ ಕೌಡಗಾಂವ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಅಳವಡಿಕೆ ವಿವಾದ ಬಗೆ ಹರಿಯದೆ ಮತ್ತಷ್ಟು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಯಾವುದೇ ಕಾರಣಕ್ಕೂ ಅಂಬೇಡ್ಕರ್ ಭಾವಚಿತ್ರ ತೆರವುಗೊಳಿಸಬಾರದು. ಒಂದು ವೇಳೆ ತೆರವು ಮಾಡಬೇಕಿದ್ದರೆ ಊರಲ್ಲಿಯ ಎಲ್ಲ ಧಾರ್ಮಿಕ ಅನಧಿಕೃತ ಕಟ್ಟಡಗಳು ತೆರವು ಮಾಡುವಂತೆ ಗ್ರಾಮದ ಒಂದು ಸಮುದಾಯ ಪಟ್ಟು ಹಿಡಿದಿದೆ. ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸೋಮವಾರ ಅಧಿಕಾರಿಗಳು ನಡೆಸಿದ ಪ್ರಯತ್ನ ಫಲ ನೀಡಿಲ್ಲ. ಹೀಗಾಗಿ ವಿವಾದ ಯಥಾಸ್ಥಿತಿ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT