ADVERTISEMENT

ಬಸವಕಲ್ಯಾಣ | ಅಪಘಾತದಲ್ಲಿ ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 7 ಜುಲೈ 2024, 14:49 IST
Last Updated 7 ಜುಲೈ 2024, 14:49 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ಬಸವಕಲ್ಯಾಣ: ತಾಲ್ಲೂಕಿನ ಹಳ್ಳಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೈಕ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಚೌಕಿವಾಡಿಯ ಅಮೂಲ್ ಪಾಟೀಲ (27) ಮೃತಪಟ್ಟಿದ್ದಾರೆ.

ಹೈದರಾಬಾದ್ ಕಡೆಯಿಂದ ವೇಗವಾಗಿ ಬಂದಿರುವ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಆಗ ಬೈಕ್ ಮೇಲೆ ಕುಳಿತಿದ್ದ ಇನ್ನೊಬ್ಬ ಯುವಕ ಸಿದ್ಧೇಶ್ವರನಿಗೆ ಹಾಗೂ ಕಾರಿನಲ್ಲಿದ್ದ ಮಹಿಳೆಯೊಬ್ಬಳಿಗೆ ಗಾಯಗಳಾಗಿವೆ. ಇವರಿಗೆ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಿಪಿಐ ಅಲಿಸಾಬ್, ಸಬ್ ಇನ್ ಸ್ಪೇಕ್ಟರ್ ಸುವರ್ಣಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.