ಬಸವಕಲ್ಯಾಣ: ಬಿಜೆಪಿ ಮುಖಂಡ ಹಾಗೂ ವ್ಯಾಪಾರಿ ಆಗಿರುವ ಸಂಜೀವ ಸುಗೂರೆ (50) ಭಾನುವಾರ ನಾಪತ್ತೆ ಆಗಿದ್ದಾರೆ.
ನಗರದ ಜೈಶಂಕರ ಓಣಿಯ ತಮ್ಮ ಮನೆಯಿಂದ ಬೆಳಿಗ್ಗೆ 4 ಗಂಟೆಗೆ ಮನೆಯಿಂದ ಹೊರಗೆ ಹೋಗಿದ್ದು ನಂತರ ಮರಳಿಲ್ಲ. ಇವರು ಕಾಣೆ ಆಗಿರುವುದಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಅವರ ಪುತ್ರ ಸಾಗರ ಠಾಣೆಗೆ ದೂರು ನೀಡಿದ್ದು ತನಿಖೆ ಕೈಗೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.