ADVERTISEMENT

ಬೀದರ್ | ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ: ಒಂದೇ ಕುಟುಂಬದ ನಾಲ್ವರ ಸಾವು

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2024, 17:02 IST
Last Updated 7 ಅಕ್ಟೋಬರ್ 2024, 17:02 IST
<div class="paragraphs"><p>ಅಪಘಾತದಲ್ಲಿ ಮೃತಪಟ್ಟವರು</p></div>

ಅಪಘಾತದಲ್ಲಿ ಮೃತಪಟ್ಟವರು

   

ಬೀದರ್: ಬೀದರ್ - ಜಹೀರಾಬಾದ್ ಮುಖ್ಯ ರಸ್ತೆಯಲ್ಲಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.

ನೆರೆಯ ತೆಲಂಗಾಣದ ಹದನೂರ ಸಮೀಪದ ಗಣೇಶಪೂರ್ ಗ್ರಾಮದ ಸಿದ್ರಾಮ್ ( 70), ಜಗನ್ನಾಥ (40), ರೇಣುಕಾ (36), ವಿನಯಕುಮಾರ್ (14) ಮೃತರು.

ADVERTISEMENT

ಪತಿ-ಪತ್ನಿ, ಮಗ ಹಾಗೂ ಮಾವ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಹೊಲದಲ್ಲಿ ಕೃಷಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಬರುವಾಗ ಬಸ್‌ ಡಿಕ್ಕಿ ಹೊಡೆದಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸಿದ್ರಾಮ ಎಂಬುವರನ್ನು ಜಹೀರಾಬಾದ್ ಪಟ್ಟಣದ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತೆಲಂಗಾಣ ಪೊಲೀಸರು ತಿಳಿಸಿದ್ದಾರೆ.

ಬೀದರ್ ಜಿಲ್ಲೆಯ ಗಡಿ ಸಮೀಪದಲ್ಲೇ ಬರುವ ತೆಲಂಗಾಣದ ಗಣೇಶಪುರ ಬಳಿ ಘಟನೆ ನಡೆದಿದ್ದು, ಸ್ಥಳದಲಲ್ಲಿ ಸಾವಿಗೀಡಾದವರ ಮೃತದೇಹಗಳನ್ನು ಬ್ರಿಮ್ಸ್‌ಗೆ ಸಾಗಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.