ಬಸವಕಲ್ಯಾಣ: ಭಾನುವಾರ ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ ಬರೆಯಲು ಹೋಗುತ್ತಿದ್ದದ್ದಾಗ ಕಾರು ಪಲ್ಟಿಯಾಗಿ ತಾಲ್ಲೂಕಿನ ಜಾಫರವಾಡಿಯ ಐಶ್ವರ್ಯ ಹಣಮಂತ ಬಂಡೆ (21) ಮೃತಪಟ್ಟಿದ್ದಾರೆ.
ಕಲಬುರಗಿಯಲ್ಲಿನ ಕೇಂದ್ರದಲ್ಲಿ ಪರೀಕ್ಷೆ ಇತ್ತು.
ಕಾರಿನ ಮೂಲಕ ಹಾರಕೂಡ ಗ್ರಾಮದವರೆಗೆ ಹೋಗಿ ಅಲ್ಲಿಂದ ಬಸ್ನಲ್ಲಿ ಕಲಬುರಗಿಗೆ ಹೋಗಲು ಅವರು ಭಾನುವಾರ ಬೆಳಿಗ್ಗೆಯೇ ಊರಿಂದ ಹೊರಟಿದ್ದರು. ಕಾರಿನಲ್ಲಿ ತಾಯಿ ಮತ್ತು ಸಹೋದರಿ ಸಹ ಇದ್ದರು. ಬಸ್ ತಪ್ಪಬಾರದು ಎಂಬ ಕಾರಣಕ್ಕೆ ಕಾರನ್ನು ವೇಗವಾಗಿ ಚಾಲನೆ ಮಾಡಲಾಗುತ್ತಿತ್ತು ಎನ್ನುಲಾಗಿದೆ. ಹಾರಕೂಡ ಸಮೀಪದಲ್ಲಿ ಕಾರು ರಸ್ತೆ ಬದಿಗೆ ಪಲ್ಟಿಯಾಗಿದೆ.
ಐಶ್ವರ್ಯ ಸ್ಥಳದಲ್ಲೇ ಮೃತಪಟ್ಟರೆ ತಾಯಿ ಹಾಗೂ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಹಾಗೂ ಸಂಬಂಧಿಕರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.
ಮುಡಬಿ ಠಾಣೆ ಪಿಎಸ್ಐ ಜಯಶ್ರೀ ಹೂಡಲ್ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.