ADVERTISEMENT

ಬಸವಕಲ್ಯಾಣ: ಜೂಜುಕೋರರಿಂದ ಹಣ ವಶ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2024, 16:19 IST
Last Updated 11 ಫೆಬ್ರುವರಿ 2024, 16:19 IST

ಬಸವಕಲ್ಯಾಣ: ತಾಲ್ಲೂಕಿನ ಸಸ್ತಾಪುರದಲ್ಲಿನ ಜೂಜು ಅಡ್ಡೆಯ ಮೇಲೆ ನಗರ ಠಾಣೆ ಪೊಲೀಸರು ದಾಳಿ ನಡೆಸಿ ನಗದು, ಕಾರು, ಮೂರು ದ್ವಿಚಕ್ರ ವಾಹನ, 7 ಮೊಬೈಲ್ ಒಳಗೊಂಡು ₹ 8.20 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ರೌಡಿ ನಿಗ್ರಹ ದಳದ ಸಬ್ ಇನ್‌ಸ್ಪೆಕ್ಟರ್ ಅಂಬರೀಶ ವಾಘಮೋಡೆ, ಸಿಬ್ಬಂದಿಗಳಾದ ವಿಜಯಕುಮಾರ, ಪುಂಡಲೀಕ್, ಅಪ್ಪಾಸಾಬ್ ಅವರೊಂದಿಗೆ ದಾಳಿ ನಡೆಸಿದ್ದು 7 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT