ADVERTISEMENT

‘ನಿರಂತರ ಪರಿಶ್ರಮವೇ ಸಾಧನೆಗೆ ಸಹಕಾರಿ’

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2024, 16:04 IST
Last Updated 13 ಏಪ್ರಿಲ್ 2024, 16:04 IST
ಚಿತ್ರ ಭಾಲ್ಕಿಯ ಶ್ರೀ ಗುರು ಪ್ರಸನ್ನ ಜನಸೇವಾ ಮಹಿಳಾ ಸಂಸ್ಥೆಯಲ್ಲಿ ಶ್ರೀ ಗುರು ಪ್ರಸನ್ನ ವಾಣಿಜ್ಯ ಪಿಯು ಕಾಲೇಜಿನ ಸಾಧಕರನ್ನು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಖಂಡ್ರೆ ಸನ್ಮಾನಿಸಿದರು
ಚಿತ್ರ ಭಾಲ್ಕಿಯ ಶ್ರೀ ಗುರು ಪ್ರಸನ್ನ ಜನಸೇವಾ ಮಹಿಳಾ ಸಂಸ್ಥೆಯಲ್ಲಿ ಶ್ರೀ ಗುರು ಪ್ರಸನ್ನ ವಾಣಿಜ್ಯ ಪಿಯು ಕಾಲೇಜಿನ ಸಾಧಕರನ್ನು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಖಂಡ್ರೆ ಸನ್ಮಾನಿಸಿದರು   

ಭಾಲ್ಕಿ: ‘ವಿದ್ಯಾರ್ಥಿಗಳು ಶ್ರದ್ಧೆಯಿಂದ ನಿರಂತರವಾಗಿ ಅಭ್ಯಾಸ ಮಾಡಿದಲ್ಲಿ ಮಹೋನ್ನತ ಸಾಧನೆ ಮಾಡಲು ಸಾಧ್ಯ’ ಎಂದು ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಖಂಡ್ರೆ ಹೇಳಿದರು.

ಇಲ್ಲಿನ ಗುರು ಪ್ರಸನ್ನ ಜನಸೇವಾ ಮಹಿಳಾ ಸಂಸ್ಥೆಯಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಗುರು ಪ್ರಸನ್ನ ವಾಣಿಜ್ಯ ಪಿಯು ಕಾಲೇಜಿನ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಹೆತ್ತವರ ಕನಸು ನನಸಾಗಿಸಲು ಹಾಗೂ ಭವಿಷ್ಯವನ್ನು ಉಜ್ವಲವಾಗಿ ರೂಪಿಸಿಕೊಳ್ಳಲು ಸಮಯ ಪರಿಪಾಲನೆ ಯೊಂದಿಗೆ ವಿಷಯಗಳನ್ನು ಆಳವಾಗಿ ಅಭ್ಯಸಿಸಬೇಕು ಎಂದು ತಿಳಿಸಿದರು.

ADVERTISEMENT

‘ನಮ್ಮ ಕಾಲೇಜಿನ ವಿದ್ಯಾರ್ಥಿನಿ ಭಾಗ್ಯಶ್ರೀ ದಿಗಂಬರ ಪಿಯು ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಶೇ 92ರಷ್ಟು ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುವುದು ಸಂತಸದ ಸಂಗತಿ. ಎಲ್ಲ ವಿದ್ಯಾರ್ಥಿಗಳು ಚೆನ್ನಾಗಿ ಓದಿ ಎತ್ತರದ ಸಾಧನೆ ಮಾಡಬೇಕು ಎಂದು ತಿಳಿ ಹೇಳಿದರು.

ಆಡಳಿತಾಧಿಕಾರಿ ಬಾಲರಾಜ ಶಿವನಣಗೆ, ಪದವಿ ಕಾಲೇಜಿನ ಪ್ರಾಚಾರ್ಯ ವಿಷ್ಣು ಕೋಟೆ, ಪಿಯು ಕಾಲೇಜಿನ ಪ್ರಾಚಾರ್ಯ ರಾಜ ಮೇತ್ರಿ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.