ADVERTISEMENT

ಬೀದರ್ | ಈಜಿನಲ್ಲಿ ಸಾಧನೆ: ಅರ್ಣವ್‌ ಸನ್ಮಾನ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2024, 16:15 IST
Last Updated 30 ಸೆಪ್ಟೆಂಬರ್ 2024, 16:15 IST
ಬೀದರ್‌ನ ಗುರುನಾನಕ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಕಲಬುರಗಿ ವಿಭಾಗ ಮಟ್ಟದ ದಸರಾ ಸಿ.ಎಂ. ಕಪ್ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ನಾಲ್ಕು ಪದಕ ಪಡೆದ ಅರ್ಣವ್‌ ಬಿ.ವಿ. ಶಿವಪ್ರಕಾಶ್ ಅವರನ್ನು ಗುರುನಾನಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ರೇಷ್ಮಾ ಕೌರ್ ಸನ್ಮಾನಿಸಿದರು
ಬೀದರ್‌ನ ಗುರುನಾನಕ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಕಲಬುರಗಿ ವಿಭಾಗ ಮಟ್ಟದ ದಸರಾ ಸಿ.ಎಂ. ಕಪ್ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ನಾಲ್ಕು ಪದಕ ಪಡೆದ ಅರ್ಣವ್‌ ಬಿ.ವಿ. ಶಿವಪ್ರಕಾಶ್ ಅವರನ್ನು ಗುರುನಾನಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ರೇಷ್ಮಾ ಕೌರ್ ಸನ್ಮಾನಿಸಿದರು   

ಬೀದರ್: ಕಲಬುರಗಿ ವಿಭಾಗಮಟ್ಟದ ದಸರಾ ಸಿ.ಎಂ. ಕಪ್ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಮೂರು ಚಿನ್ನ ಹಾಗೂ ಒಂದು ಬೆಳ್ಳಿ ಪದಕ ಗೆದ್ದಿರುವ ನಗರದ ಗುರುನಾನಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಅರ್ಣವ್‌ ಬಿ.ವಿ. ಶಿವಪ್ರಕಾಶ್ ಅವರನ್ನು ಶಾಲೆಯಲ್ಲಿ ಸೋಮವಾರ ಸನ್ಮಾನಿಸಲಾಯಿತು.

ಗುರುನಾನಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ರೇಷ್ಮಾ ಕೌರ್ ಶಾಲು ಹೊದಿಸಿ, ಪುಷ್ಪ ಗುಚ್ಛ ನೀಡಿ ಗೌರವಿಸಿದರು. ಅರ್ಣವ್‌ 100 ಮೀ, 200 ಮೀ ಹಾಗೂ 400 ಮೀ. ಫ್ರೀ ಸ್ಟೈಲ್ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಗುಂಪು ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿರುವುದು ಸಂತಸ ಉಂಟು ಮಾಡಿದೆ ಎಂದು ತಿಳಿಸಿದರು.

ಪ್ರಾಚಾರ್ಯೆ ನಳಿನಿ ಡಿ.ಜಿ., ಮುಖ್ಯಶಿಕ್ಷಕಿ ಆರೀಫ್ ಹಾದಿ, ಶೇಖ್ ಅಮಜದ್ ಅಲಿ, ಹನುಮಾನ್, ಭಾಗ್ಯಶಾಲಿ, ಡೀನಾ, ಇನಾಯತ್ ಅಲಿ, ದೇವಿದಾಸ್ ರಾಠೋಡ್ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.