ಇಸ್ಲಾಂಪುರ (ಜನವಾಡ): ಬೀದರ್ ತಾಲ್ಲೂಕಿನ ಇಸ್ಲಾಂಪುರ ಗ್ರಾಮದ ಹೊರವಲಯದಲ್ಲಿ ಭಾನುವಾರ ಸಿಡಿಲು ಬಡಿದು ನಾಲ್ಕು ಮೇಕೆಗಳು ಮೃತಪಟ್ಟಿವೆ.
ಇಸ್ಲಾಂಪುರ ತಾಂಡಾದ ಭೀಮ ಬನ್ಸಿ ಅವರು ಮೇಕೆ ಮೇಯಿಸಲು ಹೊಲಕ್ಕೆ ಹೋದಾಗ ಬಿರುಗಾಳಿ ಸಹಿತ ಮಳೆ ಸುರಿದಿದೆ. ಈ ವೇಳೆ ಸಿಡಿಲು ಬಡಿದು ಮೇಕೆಗಳು ಮೃತಪಟ್ಟಿವೆ.
ನಾಲ್ಕು ಆಡುಗಳ ಅಂದಾಜು ಮೌಲ್ಯ ಸುಮಾರು ₹60 ಸಾವಿರ ಎಂದು ಮಾಲೀಕ ಭೀಮ ಬನ್ಸಿ ತಿಳಿಸಿದ್ದಾರೆ.
ಭೀಮ ಬನ್ಸಿ ಅವರಿಗೆ ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು ಗ್ರಾಮದ ಸಂಗಮೇಶ ಕೌಟಗೆ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.