ADVERTISEMENT

ಮಾನವ ಸರಪಳಿಯಿಂದ ಮಾನವ ಹಕ್ಕುಗಳ ಹರಣ: ಛಲವಾದಿ ನಾರಾಯಣಸ್ವಾಮಿ ಆರೋಪ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2024, 20:37 IST
Last Updated 15 ಸೆಪ್ಟೆಂಬರ್ 2024, 20:37 IST
ಛಲವಾದಿ ನಾರಾಯಣಸ್ವಾಮಿ
ಛಲವಾದಿ ನಾರಾಯಣಸ್ವಾಮಿ   

ಬೀದರ್‌: ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯದ ಕಾಂಗ್ರೆಸ್‌ ಸರ್ಕಾರವು ಹಾಸ್ಟೆಲ್‌ನಲ್ಲಿರುವ ದಲಿತ ಹೆಣ್ಣು ಮಕ್ಕಳನ್ನು ರಸ್ತೆಗೆ ನಿಲ್ಲಿಸಿ, ಮಾನವ ಸರಪಳಿ ನಿರ್ಮಿಸಿ ಮಾನವ ಹಕ್ಕುಗಳ ಹರಣ ಮಾಡಿದೆ’ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.

ಹಾಸ್ಟೆಲ್‌, ಶಾಲೆಗಳಿಂದ ಮಕ್ಕಳನ್ನು ಕರೆದೊಯ್ದು ರಸ್ತೆಗೆ ನಿಲ್ಲಿಸಿದ್ದಾರೆ. ನಿಜವಾಗಲೂ ಪ್ರಜಾಪ್ರಭುತ್ವದ ಬಗ್ಗೆ ಗೌರವವಿದ್ದರೆ ಕಾಂಗ್ರೆಸ್‌ ಕಾರ್ಯಕರ್ತರನ್ನು ಕರೆದೊಯ್ಯಬೇಕಿತ್ತು ಎಂದು ನಗರದಲ್ಲಿ ಭಾನುವಾರ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

‘ಖರ್ಗೆಯವರೇ ರಾಹುಲ್‌ ಉಚ್ಚಾಟಿಸದಿದ್ದರೆ ವಾಚ್‌ಮನ್‌ ಆಗುತ್ತೀರಿ’:

‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಿಜವಾಗಲೂ ಎಐಸಿಸಿ ಅಧ್ಯಕ್ಷರಾಗಿದ್ದರೆ, ಗಾಂಧಿ ಕುಟುಂಬದ ಮರ್ಜಿಯಲ್ಲಿ ಇಲ್ಲವಾದರೆ ಮೀಸಲಾತಿ ತೆಗೆಯುತ್ತೇವೆ ಎಂದು ಹೇಳಿಕೆ ಕೊಟ್ಟಿರುವ ರಾಹುಲ್‌ ಗಾಂಧಿ ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಆರು ವರ್ಷ ಉಚ್ಚಾಟನೆಗೊಳಿಸಬೇಕು. ಇಲ್ಲದಿದ್ದರೆ ನೀವು ಗಾಂಧಿ ಕುಟುಂಬದ ವಾಚ್‌ಮನ್‌ ಆಗುತ್ತೀರಿ’ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದರು.

ADVERTISEMENT

ರಾಹುಲ್ ಗಾಂಧಿ ಮಾದಕ ವ್ಯಸನಿಯಂತೆ ಮಾತನಾಡುತ್ತಾರೆ ಎಂದು ಜನ ಹೇಳುತ್ತಿದ್ದಾರೆ. ನೀವು ಮಾದಕ ವ್ಯಸನಿಯೇ ಎಂದು ಪ್ರಶ್ನಿಸಿದ ನಾರಾಯಣಸ್ವಾಮಿ, ಅಮೆರಿಕಕ್ಕೆ ಹೋದರೆ ರಾಹುಲ್‌ ಗಾಂಧಿ ಅವರಿಗೆ ತಲೆ ತಿರುಗುತ್ತದೆಯೇ? ಬೇರೆ ದೇಶದಲ್ಲಿ ಕುಳಿತು ಭಾರತಾಂಬೆಯ ಬಟ್ಟೆ ಕಳಚುವ ಕೆಲಸ ರಾಹುಲ್‌ ಗಾಂಧಿ ಮಾಡಿದ್ದಾರೆ. ಭಾರತವನ್ನು ಎಳೆ ಎಳೆಯಾಗಿ ಅಪಮಾನ ಮಾಡಿದ್ದಾರೆ ಎಂದು ಟೀಕಿಸಿದರು.

ರಾಜ್ಯ ಸರ್ಕಾರ ಸಂವಿಧಾನ ಜಾಗೃತಿ ಕಾರ್ಯಕ್ರಮ ಹೆಸರಲ್ಲಿ ಹಿಂದೆ ₹ 20 ಕೋಟಿ ಖರ್ಚು ಮಾಡಿದೆ. ಈಗ ಮಾನವ ಸರಪಳಿ ನಿರ್ಮಿಸಲು ಪುನಃ ₹ 20 ಕೋಟಿ ವೆಚ್ಚ ಮಾಡಿದೆ. ಇದರಲ್ಲೂ ದುಡ್ಡು ಹೊಡೆದಿದ್ದಾರೆ
- ಛಲವಾದಿ ನಾರಾಯಣಸ್ವಾಮಿ ವಿಧಾನಪರಿಷತ್ ವಿರೋಧ ಪ‍ಕ್ಷದ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.