ADVERTISEMENT

ಜನವಾಡ | ಅರಣ್ಯ ಭೂಮಿ ಕಬಳಿಕೆ ಆರೋಪ: ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2024, 14:32 IST
Last Updated 17 ಸೆಪ್ಟೆಂಬರ್ 2024, 14:32 IST

ಕೊಳಾರ(ಕೆ)(ಜನವಾಡ): ಬೀದರ್ ತಾಲ್ಲೂಕಿನ ಕೊಳಾರ(ಕೆ) ಪ್ರದೇಶದಲ್ಲಿನ ಅರಣ್ಯ ಭೂಮಿ ಕಬಳಿಕೆ ಆರೋಪದ ಮೇಲೆ ಸಿದ್ರಾಮಯ್ಯ ಸ್ವಾಮಿ ವಿರುದ್ಧ ಬೀದರ್‍ನ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖೊಟ್ಟಿ ದಾಖಲೆ ಸೃಷ್ಟಿಸಿ ಮೀಸಲು ಅರಣ್ಯ ಪ್ರದೇಶದ ಆಸ್ತಿ ಕಬಳಿಸಿದ್ದಾರೆ. ಜಮೀನಿಗೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದರೂ ಇತರರೊಂದಿಗೆ ತೆರವುಗೊಳಿಸಲಾದ ಜಾಗಕ್ಕೆ ನುಗ್ಗಿ ಸಸ್ಯ ಪ್ರಭೇದಗಳನ್ನು ನಾಶಪಡಿಸಲು ಯತ್ನಿಸಿದ್ದಾರೆ ಎಂದು ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿ ವಿಜಯಕುಮಾರ ವಿ. ಜಾಧವ್ ನೀಡಿದ ದೂರಿನ ಮೇರೆಗೆ ಸೆ.11 ರಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT