ADVERTISEMENT

ಬೀದರ್ ಜಿಲ್ಲೆಯಲ್ಲಿ ಮುಂದುವರೆದ ಮಳೆ: ಜನಜೀವನ ಅಸ್ತವ್ಯಸ್ತ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2024, 5:50 IST
Last Updated 13 ಏಪ್ರಿಲ್ 2024, 5:50 IST
<div class="paragraphs"><p>ಮಳೆಗೆ ಬೀದರ್ ಕೇಂದ್ರ ಬಸ್ ನಿಲ್ದಾಣ ಮುಖ್ಯ ರಸ್ತೆಯಲ್ಲಿ ಅಪಾರ ಮಳೆ‌ ನೀರು ಸಂಗ್ರಹಗೊಂಡಿದೆ</p></div>

ಮಳೆಗೆ ಬೀದರ್ ಕೇಂದ್ರ ಬಸ್ ನಿಲ್ದಾಣ ಮುಖ್ಯ ರಸ್ತೆಯಲ್ಲಿ ಅಪಾರ ಮಳೆ‌ ನೀರು ಸಂಗ್ರಹಗೊಂಡಿದೆ

   

ಬೀದರ್: ಎರಡನೇ ದಿನವೂ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ವಾತಾವರಣ ಸಂಪೂರ್ಣ ತಂಪಾಗಿದೆ. ಇದೇ ವೇಳೆ ಮಳೆ ಅವಾಂತರವೂ ಸೃಷ್ಟಿಸಿದೆ. ಔರಾದ್ ತಾಲ್ಲೂಕಿನಲ್ಲಿ ಶುಕ್ರವಾರ ತಡ ರಾತ್ರಿ ಬಿರುಗಾಳಿ ಸಹಿತ ಮಳೆಯಾಗಿ ಕೆಲವೆಡೆ ಹಾನಿ ಸಂಭವಿಸಿದೆ.

ರಾಯಪಳ್ಳಿ ಗ್ರಾಮದ ಶೈಲು ರಾಮಲು (36) ಬಿರುಗಾಳಿಗೆ ಮಾಳಿಗೆ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ. ಧೂಪತಮಹಾಗಾಂವ್ ಗ್ರಾಮದಲ್ಲಿ ಸಿಡಿಲು ಬಡಿದು ರಾಮಣ್ಣ ಪ್ರಭು ಕಾಳೆ ಅವರ ಒಂದು ಎತ್ತು ಸಾವನ್ನಪ್ಪಿದರೆ ಮತ್ತೊಂದು ಎತ್ತು ತೀವ್ರ ಗಾಯಗೊಂಡಿದೆ.

ADVERTISEMENT

ಮಳೆ ಗಾಳಿಯಿಂದಾಗಿ ಕೆಲ ಗ್ರಾಮಗಳಲ್ಲಿ ತಗಡಿನ ಶೀಟ್ಗಳು ಹಾರಿ ಹೋಗಿವೆ. ಕಂಬಗಳು ಬಿದ್ದು ವಿದ್ಯುತ್ ಕಡಿತವಾಗಿರುವ ಮಾಹಿತಿ ಇದೆ. ಜೆಸ್ಕಾಂ ಹಾಗೂ ಕಂದಾಯ ನಿರೀಕ್ಷಕರಿಗೆ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ತಹಶೀಲ್ದಾರ್ ನಾಗಯ್ಯ ಹಿರೇಮಠ ತಿಳಿಸಿದ್ದಾರೆ.

ತಾಲ್ಲೂಕಿನ ಔರಾದ್ ಹೋಬಳಿಯಲ್ಲಿ 30 ಮಿಮಿ ಚಿಂತಾಕಿ-49,2 ಮಿಮಿ. ಸಂತಪುರ-20.4 ಮಿಮಿ. ದಾಬಕಾ, 38.3 ಮಿಮಿ ಮಳೆ ದಾಖಲಾಗಿದೆ.

ಕಮಲನಗರದ ಮದನೂರ, ಖತಗಾಂವ ಸುತ್ತಮುತ್ತ ಬಿರುಗಾಳಿ ಮಳೆಗೆ ಮನೆಗಳ ಶೀಟುಗಳು ಹಾರಿ ಹೋಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮಾವು ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ. ಹಲವೆಡೆ ಬುಡಸಮೇತ ಮರಗಳು ನೆಲಕ್ಕುರುಳಿವೆ.

ಬೀದರ್ ನಗರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಶುಕ್ರವಾರ ತಡರಾತ್ರಿ ವರೆಗೆ ಮಳೆಯಾಗಿದೆ. ಶನಿವಾರ ಪುನಃ ಮಳೆ ಆರಂಭಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಹುಲಸೂರ, ಹುಮನಾಬಾದ್, ಬಸವಕಲ್ಯಾಣದಲ್ಲೂ ಮಳೆಯಾಗಿದೆ.

ಕಮಲನಗರ ತಾಲ್ಲೂಕಿನ ಮದನೂರಿನಲ್ಲಿ ಮನೆಯ ಶೀಟುಗಳು ಹಾರಿ ಹೋಗಿದ್ದು, ಒಳಗಿದ್ದ ದವಸ ಧಾನ್ಯ ಹಾಳಾಗಿವೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.