ADVERTISEMENT

ಚಿಟಗುಪ್ಪ | ಮಳೆ ಹಾನಿ: ಶಾಸಕರಿಂದ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2024, 15:28 IST
Last Updated 15 ಜೂನ್ 2024, 15:28 IST
ಚಿಟಗುಪ್ಪ ತಾಲ್ಲೂಕಿನ ಮುಸ್ತರಿ ವಾಡಿ ಗ್ರಾಮದಲ್ಲಿ ಮಳೆಯಿಂದ ಕೊಚ್ಚಿ ಹೋಗಿರುವ ಸೇತುವೆಯನ್ನು ಶಾಸಕ ಡಾ.ಸಿದ್ಧಲಿಂಗಪ್ಪ ಪಾಟೀಲ ವೀಕ್ಷಿಸಿದರು
ಚಿಟಗುಪ್ಪ ತಾಲ್ಲೂಕಿನ ಮುಸ್ತರಿ ವಾಡಿ ಗ್ರಾಮದಲ್ಲಿ ಮಳೆಯಿಂದ ಕೊಚ್ಚಿ ಹೋಗಿರುವ ಸೇತುವೆಯನ್ನು ಶಾಸಕ ಡಾ.ಸಿದ್ಧಲಿಂಗಪ್ಪ ಪಾಟೀಲ ವೀಕ್ಷಿಸಿದರು   

ಚಿಟಗುಪ್ಪ: ಎರಡು ದಿನಗಳ ಹಿಂದೆ ಸುರಿದ ಮಳೆಯಿಂದ ತಾಲ್ಲೂಕಿನ ವಿವಿಧೆಡೆ ಹಾನಿಯಾದ ರಸ್ತೆ, ಸೇತುವೆಯನ್ನು ಶನಿವಾರ ಶಾಸಕ ಡಾ.ಸಿದ್ಧಲಿಂಗಪ್ಪ ಪಾಟೀಲ ಭೇಟಿ ನೀಡಿ ವೀಕ್ಷಿಸಿದರು.

ತಾಲ್ಲೂಕಿನ ಉಡಬಾಳ–ಮುಸ್ತರಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿನ ಸೇತುವೆ ಕೊಚ್ಚಿಕೊಂಡು ಹೋಗಿದ್ದು ಜನಸಂಚಾರಕ್ಕೆ ಕಷ್ಟವಾಗುತ್ತಿದೆ. ಹೀಗಾಗಿ ಅಧಿಕಾರಿಗಳು ತಕ್ಷಣ ದುರಸ್ತಿ ಕಾರ್ಯ ಕೈಗೊಂಡು ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಹಶೀಲ್ದಾರ್‌ ರವೀಂದ್ರ ದಾಮಾ, ಕಂದಾಯ ನಿರೀಕ್ಷಕ ಮಹಾರುದ್ರ, ಸಾಗರ ಪಾಟೀಲ್‌, ಚಂದು, ಗೋಪಾಲಕೃಷ್ಣ, ಪಪ್ಪುರಾಜ್‌ ಇತರರು ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.