ಬೀದರ್: ಜಿಲ್ಲೆಯಲ್ಲಿರುವ ಅಲೆಮಾರಿ ಜನಾಂಗದವರಿಗೆ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ ಸಮೀಪ ನಡೆಸುತ್ತಿರುವ ಧರಣಿ ಬುಧವಾರ ಎರಡನೇ ದಿನಕ್ಕೆ ಕಾಲಿರಿಸಿದೆ.
ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆಯವರು ಧರಿಣಿ ನೇತೃತ್ವ ವಹಿಸಿ ಎರಡು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಅಲೆಮಾರಿಗಳಿಗೆ ವಸತಿ ಸೇರಿದಂತೆ ಮೂಲಸೌಕರ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಸತತ ನಾಲ್ಕು ತಿಂಗಳಿಂದ ಹೋರಾಟ ನಡೆಸಲಾಗುತ್ತಿದೆ. ಆದರೆ, ಜಿಲ್ಲಾಡಳಿತ ಕಿವಿಗೊಟ್ಟಿಲ್ಲ. ಈ ಸಲ ಹೋರಾಟ ತಾರ್ಕಿಕ ಅಂತ್ಯ ಕಾಣುವವರೆಗೆ ಮುಂದುವರೆಸಲಾಗುವುದು ಎಂದು ಓಂಪ್ರಕಾಶ ರೊಟ್ಟೆ ತಿಳಿಸಿದ್ದಾರೆ. ವಿವಿಧ ಭಾಗದ ಅಲೆಮಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.