ADVERTISEMENT

ಬೀದರ್‌ | ಪರಿಶಿಷ್ಟ ಮುಖಂಡ ಬಿಜೆಪಿ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 4 ಮೇ 2024, 16:27 IST
Last Updated 4 ಮೇ 2024, 16:27 IST
ಮುಖಂಡ ಬಾಬುರಾವ ಅಡಕೆ ಅವರು ಬೀದರ್‌ನಲ್ಲಿ ಶನಿವಾರ ಬಿಜೆಪಿ ಸೇರ್ಪಡೆಯಾದರು. ಪಕ್ಷದ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಅವರು ಬಿಜೆಪಿ ಧ್ವಜ ಕೊಟ್ಟು ಪಕ್ಷಕ್ಕೆ ಬರಮಾಡಿಕೊಂಡರು
ಮುಖಂಡ ಬಾಬುರಾವ ಅಡಕೆ ಅವರು ಬೀದರ್‌ನಲ್ಲಿ ಶನಿವಾರ ಬಿಜೆಪಿ ಸೇರ್ಪಡೆಯಾದರು. ಪಕ್ಷದ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಅವರು ಬಿಜೆಪಿ ಧ್ವಜ ಕೊಟ್ಟು ಪಕ್ಷಕ್ಕೆ ಬರಮಾಡಿಕೊಂಡರು    

ಬೀದರ್‌: ಔರಾದ್‌ ತಾಲ್ಲೂಕಿನ ವಡಗಾಂವ್‌ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಪರಿಶಿಷ್ಟ ಜಾತಿಯ ಮುಖಂಡ ಬಾಬುರಾವ ಅಡಕೆ ಅವರು ನಗರದಲ್ಲಿ ಶನಿವಾರ ಬಿಜೆಪಿ ಸೇರ್ಪಡೆಯಾದರು.

ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಅವರು ಪಕ್ಷದ ಧ್ವಜ ಕೊಟ್ಟು ಬರಮಾಡಿಕೊಂಡರು. ಬಾಬುರಾವ ಅಡಕೆ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ‘ಆಮ್ ಆದ್ಮಿ’ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ಬೀದರ್ ನಗರ ಘಟಕದ ಅಧ್ಯಕ್ಷ ಶಶಿಧರ್‌ ಹೊಸಳ್ಳಿ, ರಾಜ್ಯ ಪ್ರಕೋಷ್ಠ ಸಂಚಾಲಕ ರಾಜಶೇಖರ ನಾಗಮೂರ್ತಿ, ಬಿಜೆಪಿ ದಕ್ಷಿಣ ಕ್ಷೇತ್ರದ ಮುಖಂಡ ನಾಗಭೂಷಣ ಕಮಠಾಣೆ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.