ADVERTISEMENT

ಬೀದರ್: 12 ಗ್ರಾಮ ಪಂಚಾಯಿತಿಗಳಲ್ಲಿ ಶ್ರಮದಾನ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2024, 16:16 IST
Last Updated 30 ಸೆಪ್ಟೆಂಬರ್ 2024, 16:16 IST
ಬೀದರ್‌ನ ಶಹಾಪುರ ಗೇಟ್ ಸಮೀಪದ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜು ಆವರಣದಲ್ಲಿಸೋಮವಾರ ಏರ್ಪಡಿಸಿದ್ದ ಸ್ವಚ್ಛತೆಯೇ ಸೇವೆ ಅಭಿಯಾನದಲ್ಲಿ ವಿದ್ಯಾರ್ಥಿಗಳು ಪ್ರತಿಜ್ಞೆ ಸ್ವೀಕರಿಸಿದರು
ಬೀದರ್‌ನ ಶಹಾಪುರ ಗೇಟ್ ಸಮೀಪದ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜು ಆವರಣದಲ್ಲಿಸೋಮವಾರ ಏರ್ಪಡಿಸಿದ್ದ ಸ್ವಚ್ಛತೆಯೇ ಸೇವೆ ಅಭಿಯಾನದಲ್ಲಿ ವಿದ್ಯಾರ್ಥಿಗಳು ಪ್ರತಿಜ್ಞೆ ಸ್ವೀಕರಿಸಿದರು   

ಬೀದರ್: ಸ್ವಚ್ಛತೆಯೇ ಸೇವೆ ಅಭಿಯಾನದ ಅಂಗವಾಗಿ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಬೀದರ್ ತಾಲ್ಲೂಕಿನ 12 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸೋಮವಾರ ಶ್ರಮದಾನ ಅಭಿಯಾನ ನಡೆಯಿತು.

ಒಂದು ಬಸ್‍ನಲ್ಲಿ 50 ಮಂದಿಯಂತೆ ಶಾಹೀನ್ ವಿದ್ಯಾರ್ಥಿಗಳು 12 ಬಸ್‍ಗಳಲ್ಲಿ ಅಲಿಯಾಬಾದ್, ಅಮಲಾಪುರ, ಆಣದೂರ, ಅಷ್ಟೂರ, ಕಮಠಾಣ, ಚಿಟ್ಟಾ, ಗಾದಗಿ, ಮಲ್ಕಾಪುರ, ಕೊಳಾರ(ಕೆ), ಜನವಾಡ, ಕಾಡವಾದ ಯದಲಾಪುರಕ್ಕೆ ತೆರಳಿ ಸ್ವಚ್ಛತಾ ಕಾರ್ಯ ಕೈಗೊಂಡರು.

ನಗರದ ಶಹಾಪುರ ಗೇಟ್ ಸಮೀಪದ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜು ಆವರಣದಲ್ಲಿ ಶ್ರಮದಾನ ಅಭಿಯಾನಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ ಚಾಲನೆ ನೀಡಿದರು.

ADVERTISEMENT

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕಿರಣ ಪಾಟೀಲ, ಸ್ವಚ್ಛ ಭಾರತ ಮಿಷನ್ ವಿಶೇಷ ನೋಡಲ್ ಅಧಿಕಾರಿ ಗೌತಮ ಅರಳಿ, ಪ್ರಾಚಾರ್ಯ ಖಾಜಾ ಪಟೇಲ್, ಜಗನ್ನಾಥ ಮೂರ್ತಿ, ಶಿವಕುಮಾರ ಯಲಾಲ್, ಪಂಡಿತ ವಾಡೇಕರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.