ಚಾಮರಾಜನಗರ: ಚಾಮರಾಜನಗರ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಸಂತೇಮರಹಳ್ಳಿ ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಚೆಕ್ಪೋಸ್ಟ್ಗಳಲ್ಲಿ ದಾಖಲೆಗಳಿಲ್ಲದೆ ಸಾಗಣೆ ಮಾಡುತ್ತಿದ್ದ ₹1,59,770 ನಗದು ಹಣವನ್ನು ಎಸ್.ಎಫ್.ಟಿ ತಂಡದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಸಂತೇಮರಹಳ್ಳಿ ಚೆಕ್ಪೋಸ್ಟ್ನಲ್ಲಿ ಬೆಳಿಗ್ಗೆ ಮಂಗಳವಾರ 11.15ರ ಸುಮಾರಿಗೆ ಮೈಸೂರಿನಿಂದ ಬರುತ್ತಿದ್ದ ವಾಹನದಲ್ಲಿ ದೋಲಾರಾಂ ಬಿನ್ ಉಮಾರಾಂ ಎಂಬುವವರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹56 ಸಾವಿರ ಮತ್ತು
ಗುಂಡ್ಲುಪೇಟೆ ಐ.ಬಿ. ಸರ್ಕಲ್ ಬಳಿ ಇರುವ ಚೆಕ್ಪೋಸ್ಟ್ನಲ್ಲಿ ಸೋಮವಾರ ರಾತ್ರಿ (ಏಪ್ರಿಲ್ 1) ರಾತ್ರಿ 10.30ರ ಸಮಯದಲ್ಲಿ ಕೇರಳದಿಂದ ಬರುತ್ತಿದ್ದ ಕಾರಿನಲ್ಲಿ ಪ್ರಸಾದ್ ಎಂಬುವವರು ಸಾಗಿಸುತ್ತಿದ್ದ ₹1,03,770 ನಗದನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಹಣ ಸಾಗಣೆ ಮಾಡುತ್ತಿದ್ದ ಬಗ್ಗೆ ವಿಚಾರಣೆ ಮಾಡಿದ ವೇಳೆ ಸ್ಪಷ್ಟ, ಸಮಂಜುಸ ಉತ್ತರ ನೀಡದೇ ಇರುವುದರಿಂದ ಹಣವನ್ನು ವಶಕ್ಕೆ ಪಡೆದು ಆಯಾ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಉಪ ಖಜಾನೆಗಳಲ್ಲಿ ಇರಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಶಿಲ್ಪಾ ನಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.