ಮಹದೇಶ್ವರ ಬೆಟ್ಟ: ಇಲ್ಲಿನ ಮಹದೇಶ್ವರಸ್ವಾಮಿ ದೇವಾಲಯಕ್ಕೆ ಬೆಂಗಳೂರಿನ ಕುಟುಂಬವೊಂದು ಬೆಳ್ಳಿ ತಟ್ಟೆಯನ್ನು ಕಾಣಿಕೆಯನ್ನಾಗಿ ಸಮರ್ಪಿಸಿದೆ.
ಮೂಲತಃ ಮೈಸೂರು ಜಿಲ್ಲೆ ತಿ.ನರಸೀಪುರ ತಾಲ್ಲೂಕಿನ ಸುಜ್ಜಲೂರು ಗ್ರಾಮದ ನಾಗಮಣಿ ಮತ್ತು ಅವರ ಕುಟುಂಬ ವರ್ಗದವರು ಈ ಕಾಣಿಕೆಯನ್ನು ನೀಡಿದ್ದು, ದೀಪ ಸಹಿತ ಬೆಳ್ಳಿ ತಟ್ಟೆಯು 1.600 ಕೆಜಿ ತೂಕ ಇದೆ.
ನಾಗಮಣಿ ಹಾಗೂ ಅವರ ಕುಟುಂಬದ ಸದಸ್ಯರು ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಭಾನುವಾರ ಬೆಳ್ಳಿ ತಟ್ಟೆಯನ್ನು ಹಸ್ತಾಂತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.