ಹನೂರು: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸೋಮವಾರ 35 ವರ್ಷದ ಹೆಣ್ಣಾನೆಯ ಮೃತದೇಹ ಪತ್ತೆಯಾಗಿದೆ.
ಬೈಲೂರು ವನ್ಯಜೀವಿ ವಲಯದ ಮಾವತ್ತೂರು ಅರಣ್ಯ ಪ್ರದೇಶದಲ್ಲಿ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಗೆ ಆನೆಯ ಕಳೇಬರ ಕಂಡುಬಂದಿದೆ. ಸ್ಥಳಕ್ಕೆ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಡಿಸಿಎಫ್ ದೀಪ್ ಜೆ.ಕಂಟ್ರಾಕ್ಟರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಂದಗೋಪಾಲ್ ಭೇಟಿನೀಡಿ ಪರಿಶೀಲಿಸಿದರು.
ಪಶು ವೈದ್ಯಾಧಿಕಾರಿ ಪ್ರಮೋದ್ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದ್ದು ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.