ಸಂತೇಮರಹಳ್ಳಿ: ಸಮೀಪದ ಕೆಂಪನಪುರ ಗ್ರಾಮದಲ್ಲಿ ಮನೆ ಬೀಗ ಒಡೆದು ₹1 ಲಕ್ಷ ಹಣವನ್ನು ಕಳ್ಳರು ದೋಚಿರುವ ಘಟನೆ ಈಚೆಗೆ ನಡೆದಿದೆ.
ಗ್ರಾಮದ ಶಿವಣ್ಣನಾಯಕ ಎಂಬುವರು ಕಳೆದ 3 ದಿನಗಳ ಹಿಂದೆ ಸಂಬಂಧಿಕರ ಮನೆಗೆ ಹೋಗಿದ್ದರು. ಈ ವೇಳೆಯಲ್ಲಿ ಮನೆಯ ಬಾಗಿಲು ಒಡೆದು ಮನೆಯಲ್ಲಿಟ್ಟಿದ್ದ ಹಣವನ್ನು ಕಳ್ಳರು ದೋಚಿದ್ದಾರೆ.
ಘಟನೆ ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದ್ದೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂಬಂಧ ಸಂತೇಮರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.