ಗುಂಡ್ಲುಪೇಟೆ: ಲೋಕಸಭಾ ಚುನಾವಣೆ ಹಿನ್ನೆಲೆ ಅಬಕಾರಿ ಪೊಲೀಸರು ಗಸ್ತನ್ನು ಚುರುಕುಗೊಳಿಸಿದ್ದು ಪಟ್ಟಣದಲ್ಲಿ ಅಕ್ರಮ ಮದ್ಯ ಸಾಗಾಟವನ್ನು ತಡೆದ ಘಟನೆ ಗುರುವಾರ ಸಂಜೆ ನಡೆದಿದೆ.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗಸ್ತು ನಡೆಸುವಾಗ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಬೈಕ್ ಬಿಟ್ಟು ಪರಾರಿಯಾಗಿದ್ದಾನೆ.
ಇನ್ನು, ಸಿಬ್ಬಂದಿ ಕೇರಳ ನೋಂದಣಿ ಬೈಕ್, 5 ಲೀ. ಮದ್ಯ ವಶಪಡಿಸಿಕೊಂಡು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.