ADVERTISEMENT

ಕೊಳ್ಳೇಗಾಲ | ಚಿರತೆ ದಾಳಿ ಹಸು ಸಾವು

​ಪ್ರಜಾವಾಣಿ ವಾರ್ತೆ
Published 12 ಮೇ 2024, 15:29 IST
Last Updated 12 ಮೇ 2024, 15:29 IST
ತಾಲ್ಲೂಕಿನ ಅರೇಪಾಳ್ಯ ಗ್ರಾಮದ ಕಾಡಂಚಿನ ಪ್ರದೇಶದಲ್ಲಿ ಚಿರತೆ ದಾಳಿಗೆ ಹಸು ಭಾನುವಾರ ಸಂಜೆ ಬಲಿಯಾಗಿದೆ‌.
ತಾಲ್ಲೂಕಿನ ಅರೇಪಾಳ್ಯ ಗ್ರಾಮದ ಕಾಡಂಚಿನ ಪ್ರದೇಶದಲ್ಲಿ ಚಿರತೆ ದಾಳಿಗೆ ಹಸು ಭಾನುವಾರ ಸಂಜೆ ಬಲಿಯಾಗಿದೆ‌.   

ಕೊಳ್ಳೇಗಾಲ: ತಾಲ್ಲೂಕಿನ ಅರೇಪಾಳ್ಯದ ಕಾಡಂಚಿನ ಪ್ರದೇಶದಲ್ಲಿ ಚಿರತೆ ದಾಳಿಗೆ ಹಸು ಭಾನುವಾರ ಮೃತಪಟ್ಟಿದೆ.

ಗ್ರಾಮದ ಮುತ್ತು ಎನ್ನುವರಿಗೆ ಸೇರಿದ ಹಸುವನ್ನು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ ಸಂದರ್ಭದಲ್ಲಿ ಚಿರತೆಯೊಂದು ದಾಳಿ ಮಾಡಿದೆ. ಚಿರತೆ ನೋಡಿದ ಗ್ರಾಮಸ್ಥರು ಜೋರಾಗಿ ಕೂಗಿಕೊಂಡ ಪರಿಣಾಮ ಚಿರತೆ ಓಡಿ ಹೋಗಿದೆ ಎನ್ನಲಾಗಿದೆ.

ನಂತರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇಲಾಖೆಯವರು ವೀಕ್ಷಣೆ ಮಾಡಿ ಹಸುವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.