ADVERTISEMENT

ಮಹದೇಶ್ವರ ಬೆಟ್ಟ: ಗುಜರಾತ್ ಪ್ರವಾಸಿಗರ ಬಸ್ ಉರುಳಿ 15 ಜನರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 25 ಜನವರಿ 2023, 5:17 IST
Last Updated 25 ಜನವರಿ 2023, 5:17 IST
ಗುಜರಾತ್ ಪ್ರವಾಸಿಗರಿದ್ದ ಬಸ್ ಉರುಳಿ ಬಿದ್ದಿರುವ ದೃಶ್ಯ
ಗುಜರಾತ್ ಪ್ರವಾಸಿಗರಿದ್ದ ಬಸ್ ಉರುಳಿ ಬಿದ್ದಿರುವ ದೃಶ್ಯ   

ಹನೂರು (ಚಾಮರಾಜನಗರ): ತಮಿಳುನಾಡಿನಿಂದ ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಗುಜರಾತ್ ಪ್ರವಾಸಿಗರಿದ್ದ ಬಸ್ ಪಾಲರ್ ಬಳಿ ಬುಧವಾರ ಬೆಳಿಗ್ಗೆ ಉರುಳಿ ಬಿದ್ದಿದ್ದು, 15 ಜನರು ಗಾಯಗೊಂಡಿದ್ದಾರೆ.

ತಮಿಳುನಾಡಿನಿಂದ ಪ್ರವಾಸ ಮುಗಿಸಿಕೊಂಡು ಪಾಲಾರ್ ಮೂಲಕ ರಾಜ್ಯಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.

ಬುಧವಾರ ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಪಾಲಾರ್ ರಸ್ತೆಯ ಎರಡನೇ ತಿರುವು ಬಳಿ ಬಸ್ ಚಾಲಕನ ನಿಯಂತ್ರಣಕ್ಕೆ ಸಿಗದೆ ಉರುಳಿ ಬಿದ್ದಿದೆ. ಬಸ್ಸಿನಲ್ಲಿ ಒಟ್ಟು 50 ಜನರಿದ್ದು, ಈ ಪೈಕಿ 15 ಜನರಿಗೆ ಗಾಯಗಳಾಗಿವೆ.

ಗಾಯಾಳುಗಳಿಗೆ ಮಹದೇಶ್ವರ ಬೆಟ್ಟ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.