ADVERTISEMENT

ಪಾಲಾರ್ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2024, 1:28 IST
Last Updated 19 ಸೆಪ್ಟೆಂಬರ್ 2024, 1:28 IST

ಚಾಮರಾಜನಗರ: ಹನೂರು ತಾಲ್ಲೂಕಿನ ಪಾಲಾರ್‌ ವನ್ಯಜೀವಿ ವಲಯದ ಡಿಆರ್‌ಎಫ್‌ಒ ಭೋಜಪ್ಪ ಬುಧವಾರ ಲೋಕಾಯುಕ್ತ ‍ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಡಾ.ಅಂಬೇಡ್ಕರ್ ನಿವಾಸ್‌ ಯೋಜನೆಯಡಿ ಹನೂರು ತಾಲ್ಲೂಕಿನ ಪಾಲಾರ್‌ ಗ್ರಾಮದಲ್ಲಿ ಮನೆ ನಿರ್ಮಾಣಕ್ಕೆ ಅನುಮತಿ ನೀಡಲು 18 ಮಂದಿ ಫಲಾನುಭವಿಗಳಿಂದ ತಲಾ 1 ಸಾವಿರದಂತೆ 18,000 ಹಣಕ್ಕೆ ಭೋಜಪ್ಪ ಬೇಡಿಕೆ ಇರಿಸಿದ್ದರು. ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಕೆಯಾಗಿತ್ತು. ಬಳಿಕ ಫಲಾನುಭವಿಗಳಿಂದ ಹಣ ಪಡೆಯುವಾಗ ದಾಳಿ ನಡೆಸಿದ ಲೋಕಾಯುಕ್ತ ಇನ್‌ಸ್ಪೆಕ್ಟರ್ ಶಶಿಕುಮಾರ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT