ADVERTISEMENT

ದೊಡ್ಡಕೆರೆ ಕಾಮಗಾರಿ ಪರಿಶೀಲಿಸಿದ ಕಾರ್ಯದರ್ಶಿ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2024, 4:43 IST
Last Updated 21 ಫೆಬ್ರುವರಿ 2024, 4:43 IST
ಮಹದೇಶ್ವರ ಬೆಟ್ಟದ ದೊಡ್ಡಕೆರೆಗೆ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ದೊಡ್ಡಕೆರೆ ಅಭಿವೃದ್ಧಿ ಕಾಮಗಾರಿ ಬಗ್ಗೆ ಮಾಹಿತಿ ಪಡೆದರು
ಮಹದೇಶ್ವರ ಬೆಟ್ಟದ ದೊಡ್ಡಕೆರೆಗೆ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ದೊಡ್ಡಕೆರೆ ಅಭಿವೃದ್ಧಿ ಕಾಮಗಾರಿ ಬಗ್ಗೆ ಮಾಹಿತಿ ಪಡೆದರು   

: ತಾಲ್ಲೂಕಿನ ಮಹದೇಶ್ವರ ಬೆಟ್ಟದ ದೊಡ್ಡಕೆರೆಗೆ ಮಂಗಳವಾರ ಭೇಟಿ ನೀಡಿದ ಪ್ರಾಧಿಕಾರದ ಕಾರ್ಯದರ್ಶಿ ಅವರು ಆಗಿರುವ ಕಾಮಗಾರಿ ಹಾಗೂ ಸುತ್ತಲಿನ ಪ್ರದೇಶಗನ್ನು ಪರಿಶೀಲಿಸಿದರು. 

ಕೆರೆ ಕಾಮಗಾರಿ ನಿಧಾನವಾಗಿರುವ ಬಗ್ಗೆ ಮತ್ತು ಕೆರೆಯ ಮಗ್ಗುಲಲ್ಲೇ ಕೊಳಚೆ ನೀರು ನಿಲ್ಲುತ್ತಿರುವ ಬಗ್ಗೆ ‘ಪ್ರಜಾವಾಣಿ’ಯ ಮಂಗಳವಾರದ ಸಂಚಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು. 

'ದೊಡ್ಡಕೆರೆ ಕಲ್ಯಾಣಿ ಅಭಿವೃದ್ಧಿ ಕಾರ್ಯವು ನಾಲ್ಕು ತಿಂಗಳಲ್ಲಿ ಪೂರ್ಣವಾಗಲಿದೆ. ಸರ್ಕಾರದಿಂದ ಅನುದಾನ ಆಗಬೇಕಾಗಿದ್ದು ಬಳಿಕ ಕೊಳಚೆ ನೀರನ್ನು ಬೇರೆಡೆಗೆ ಹರಿಸಲು ಕ್ರಮಕೈಗೊಳ್ಳಲಾಗುವುದು. ಇದಕ್ಕೆ ಒಂದಷ್ಟು ಕಾಲಾವಕಾಶ ತೆಗದುಕೊಳ್ಳಲಿದೆ. ಈ ಸಂಬಂಧ ಅಧಿಕಾರಿಗಳಿಗೆ ಸೂಚನೆ ಸಹ ನೀಡಲಾಗಿದೆ’ ಎಂದು ರಘು ಅವರು ತಿಳಿಸಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.