ADVERTISEMENT

ಕೊಳ್ಳೇಗಾಲ: ಮಹಿಳೆಯ ಚಿನ್ನದ ಸರ ಕಿತ್ತು ಪರಾರಿ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2023, 5:41 IST
Last Updated 8 ಡಿಸೆಂಬರ್ 2023, 5:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೊಳ್ಳೇಗಾಲ: ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಕಳ್ಳರು ದಾಳಿ ನಡೆಸಿ ಕಜ್ಜಿಹುಂಡಿ ಗ್ರಾಮದ ಸುಧಾ 25 ಗ್ರಾಂ ಚಿನ್ನದ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದಾರೆ.

ತಾಲ್ಲೂಕಿನ ಟಗರು ಪುರ ಹಾಗೂ ಚಿಲಕವಾಡಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಮದುವೆ ಮುಗಿಸಿಕೊಂಡು ಗಂಡ ಚಂದ್ರಪ್ಪನ ಜೊತೆಯಲ್ಲಿ ಕಜ್ಜಿಹುಂಡಿ ಗ್ರಾಮಕ್ಕೆ ತೆರಳುತ್ತಿದ್ದರು. ಸುಧಾ ಕತ್ತಿನಲ್ಲಿದ್ದ 25 ಗ್ರಾಂ ₹1.12 ಲಕ್ಷ ಮೌಲ್ಯದ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿದ್ದಾರೆ.

ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಕಳ್ಳರ ಪತ್ತೆಗೆ ಕ್ರಮ ಜರುಗಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.