ADVERTISEMENT

ಗೌರಿಬಿದನೂರು | ಟ್ಯಾಂಕರ್‌ ಡಿಕ್ಕಿ: ಬೈಕ್‌ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 13 ಮೇ 2024, 14:59 IST
Last Updated 13 ಮೇ 2024, 14:59 IST

ಗೌರಿಬಿದನೂರು: ತಾಲ್ಲೂಕಿನ ತೊಂಡೇಬಾವಿ ಹೋಬಳಿ ಕಾಮಲಾಪುರದ ಸಮೀಪ ಬೈಕ್‌ಗೆ ಪೆಟ್ರೋಲ್‌ ಟ್ಯಾಂಕರ್‌ ಡಿಕ್ಕಿ ಹೊಡೆದು ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಆಂಧ್ರಪ್ರದೇಶದ ಹಿಂದೂಪುರ ತಾಲ್ಲೂಕಿನ ಸಂತೇಬಿದನೂರು ಗ್ರಾಮದ ವೆಂಕಟೇಶ(28) ಮೃತ ಸವಾರ.

ವೆಂಕಟೇಶ್‌ ಬೆಂಗಳೂರಿನಲ್ಲಿ ಮಾರತ್‌ಹಳ್ಳಿಯಲ್ಲಿ ಕೆಲಸ ಮಾಡುತ್ತಿದ್ದು, ಭಾನುವಾರ ರಾತ್ರಿ ಮತ ಚಲಾಯಿಸಲು ತಮ್ಮ ಸ್ವಗ್ರಾಮ ಸಂತೇಬಿದನೂರಿಗೆ ಸ್ನೇಹಿತರೊಂದಿಗೆ ತೆರಳುವ ವೇಳೆ ಅಪಘಾತ ನಡೆದಿದೆ.

ADVERTISEMENT

ಮಂಚೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.