ADVERTISEMENT

ಮುದುವಾಡಿ ಹೊಸಹಳ್ಳಿಯಲ್ಲಿ ಕೃಷಿ ಮಾಹಿತಿ ಕೇಂದ್ರ ಉದ್ಘಾಟನೆ

ಕೃಷಿ ಮಾಹಿತಿ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2023, 15:46 IST
Last Updated 28 ನವೆಂಬರ್ 2023, 15:46 IST
ಚಿಂತಾಮಣಿ ರೇಷ್ಮೆ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮುದುವಾಡಿ ಹೊಸಹಳ್ಳಿಯಲ್ಲಿ ಕೃಷಿ ಮಾಹಿತಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಚಿಂತಾಮಣಿ ರೇಷ್ಮೆ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮುದುವಾಡಿ ಹೊಸಹಳ್ಳಿಯಲ್ಲಿ ಕೃಷಿ ಮಾಹಿತಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.   

ಚಿಂತಾಮಣಿ: ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದಡಿ ರೇಷ್ಮೆ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮಂಗಳವಾರ ಮುದುವಾಡಿ ಹೊಸಹಳ್ಳಿಯಲ್ಲಿ ‘ಕೃಷಿ ಮಾಹಿತಿ ಕೇಂದ್ರದ ಉದ್ಘಾಟನಾ ಸಮಾರಂಭ’ ಮತ್ತು ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ರೇಷ್ಮೆ ಕೃಷಿ ವಿಭಾಗದ ಮುಖ್ಯಸ್ಥ ರಾಮಕೃಷ್ಣನಾಯ್ಕ ಮಾತನಾಡಿ. ಕೃಷಿಗೆ ಸಂಬಂಧಿಸಿದ ಮಾಹಿತಿಯನ್ನು ಸದುಪಯೋಗಪಡಿಸಿಕೊಳ್ಳಬೇಕು. ಪರಿಸರದಲ್ಲಿ ಗಿಡ–ಮರ ನೆಡುವುದರಿಂದ ಅಗುವ ಲಾಭಗಳ ಬಗ್ಗೆ ಮಾಹಿತಿ ನೀಡಿದರು.

ಸಹಾಯಕ ಪ್ರಾಧ್ಯಾಪಕ ಸಂಜೀವ್ ಕ್ಯಾತಪ್ಪನವರ್ ಮಾತನಾಡಿ, ವನಮಹೋತ್ಸವ ಪ್ರಾಮುಖ್ಯತೆ ಮತ್ತು ಆರಣ್ಯ ಇಲಾಖೆಯಲ್ಲಿರುವ ಯೋಜನೆಗಳ ಮಾಹಿತಿ ಪಡೆಯಬೇಕೆಂದು ಹೇಳಿದರು.

ADVERTISEMENT

ಸಂಯೋಜಕ ಶ್ರೀನಿವಾಸ ರೆಡ್ಡಿ, ಗ್ರಾಮೀಣ ಕೃಷಿ ಅನುಭವ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಡೀನ್ ಪಿ.ವೆಂಕಟರವಣ, ಪ್ರಾಧ್ಯಾಪಕರಾದ ಎನ್.ಮಂಜುಳ, ಜಿ.ದಾಕ್ಷಾಯಿಣಿ, ಕ್ಷೇತ್ರ ಅಧೀಕ್ಷಕ ವೆಂಕಟಾಚಲಪತಿ, ಸರ್ಕಾರಿ ಶಾಲೆ ಶಿಕ್ಷಕರು, ವಿದ್ಯಾರ್ಥಿಗಳು, ಊರಿನ ಹಿರಿಯರು ಭಾಗವಹಿಸಿದ್ದರು.

ಚಿಂತಾಮಣಿಯ ರೇಷ್ಮೆ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮುದುವಾಡಿ ಹೊಸಹಳ್ಳಿಯಲ್ಲಿ ಕೃಷಿ ಮಾಹಿತಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಗಿಡ ನೆಟ್ಟರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.