ADVERTISEMENT

ಚಿಂತಾಮಣಿ ಯೋಜನಾ ಪ್ರಾಧಿಕಾರಕ್ಕೆ ಹೊಸ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2024, 13:53 IST
Last Updated 19 ಮಾರ್ಚ್ 2024, 13:53 IST
ಚಿಂತಾಮಣಿ ನಗರಾಭಿವೃದ್ಧಿಪ್ರಾಧಿಕಾರದ ಅಧ್ಯಕ್ಷ ಶ್ರೀನಾಥರೆಡ್ಡಿ
ಚಿಂತಾಮಣಿ ನಗರಾಭಿವೃದ್ಧಿಪ್ರಾಧಿಕಾರದ ಅಧ್ಯಕ್ಷ ಶ್ರೀನಾಥರೆಡ್ಡಿ   

ಚಿಂತಾಮಣಿ: ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ನಗರಸಭೆ ಮಾಜಿ ಸದಸ್ಯ ಶ್ರೀನಾಥರೆಡ್ಡಿ ನೇಮಕವಾಗಿದ್ದಾರೆ. ಯೋಜನಾ ಪ್ರಾಧಿಕಾರಕ್ಕೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಮಾರ್ಚ್ 16 ರಂದು ಆದೇಶ ಹೊರಡಿಸಿದೆ.

ನಗರದ ವೆಂಕಟಗಿರಿಕೋಟೆಯ ನಿವಾಸಿ ಸುರೇಶ್, ವೈದ್ಯ ಡಾ.ಮಹಬೂಬ್ ಪಾಷಾ, ಅಂಜನಿ ಬಡಾವಣೆಯ ನಿವಾಸಿ ಟೊಮೆಟೊ ವ್ಯಾಪಾರಿ ಆರ್.ಎಂ.ಜಿ.ಶ್ರೀನಿವಾಸ್ ಅವರನ್ನು ನಾಮನಿರ್ದೇಶನ ಮಾಡಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್ ಆದೇಶ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT