ADVERTISEMENT

ಚಿಂತಾಮಣಿ | ಬೈಕ್‌ಗೆ ಕಾರು ಡಿಕ್ಕಿ; ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2024, 14:11 IST
Last Updated 19 ಅಕ್ಟೋಬರ್ 2024, 14:11 IST
ಮೃತಪಟ್ಟ ಆಂಜನೇಯಗೌಡ
ಮೃತಪಟ್ಟ ಆಂಜನೇಯಗೌಡ   

ಚಿಂತಾಮಣಿ: ಚಿಂತಾಮಣಿ-ಚೇಳೂರು ರಸ್ತೆಯ ಮರಪಲ್ಲಿ ಕ್ರಾಸ್ ಬಳಿ ಶನಿವಾರ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಏನಿಗದಲೆ ಗ್ರಾಮದ ಆಂಜನೇಯಗೌಡ (45) ಮೃತಪಟ್ಟ ವ್ಯಕ್ತಿ. ಆಂಜನೇಯಗೌಡ ಬೈಕ್‌ನಲ್ಲಿ ಕೆಂಚಾರ್ಲಹಳ್ಳಿಗೆ ಹೋಗಿ ಕೆಲಸ ಮುಗಿಸಿಕೊಂಡು ಏನಿಗದಲೆಗೆ ವಾಪಸ್ ಬರುತ್ತಿದ್ದಾಗ ಮರಪಲ್ಲಿ ಕ್ರಾಸ್ ಬಳಿ ದುರ್ಘಟನೆ ನಡೆದಿದೆ.

ಚೇಳೂರು ಕಡೆಯಿಂದ ಚಿಂತಾಮಣಿಗೆ ಬರುತ್ತಿದ್ದ ಕಾರು ಅತಿವೇಗ ಮತ್ತು ಅಜಾಗರೂಕತೆಯ ಚಾಲನೆಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್ ಮುಗುಚಿಬಿದ್ದು ಸವಾರನಿಗೆ ತೀವ್ರವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್ ಮತ್ತು ಕಾರು ಜಖಂಗೊಂಡಿವೆ.

ADVERTISEMENT

ಕೆಂಚಾರ್ಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದರು. ಮೃತನ ಸಂಬಂಧಿಕರು ನೀಡಿದ ದೂರನ್ನು ದಾಖಲಿಸಿಕೊಂಡ ಕೆಂಚಾರ್ಲಹಳ್ಳಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.