ಶಿಡ್ಲಘಟ್ಟ: ತಾಲ್ಲೂಕಿನ ಕುದುಪಕುಂಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೊ ಸೆರೆ ಹಿಡಿದ ವ್ಯಕ್ತಿ ಮೇಲೆ ಪೋಷಕರು ಮಂಗಳವಾರ ಹಲ್ಲೆ ಮಾಡಿದ್ದಾರೆ.
ವಿಡಿಯೊ ಮಾಡಿದ್ದು ತಾನೇ ಎಂದು ಹೇಳಿಕೊಂಡಿದ್ದ ಬಯ್ಯಪ್ಪನಹಳ್ಳಿ ವಿಜಯ ಕುಮಾರ್ ಮೇಲೆ ಕುದುಪಕುಂಟೆ ಕೆಲವು ಪೋಷಕರು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ದಿಬ್ಬೂರಹಳ್ಳಿ ಪೊಲೀಸ್ ಠಾಣೆಗೆ ವಿಜಯ್ ಕುಮಾರ್ ದೂರು ನೀಡಿದ್ದಾರೆ.
ಬಿಇಒ ನರೇಂದ್ರಕುಮಾರ್ ಹಾಗೂ ಜಿಲ್ಲಾ ಸಫಾಯಿ ಕರ್ಮಚಾರಿಗಳ ಪುನರ್ವಸತಿ ಸಮಿತಿ ಸದಸ್ಯ ಲಕ್ಷ್ಮಣರಾಜು ಮಂಗಳವಾರ ಕುದುಪಕುಂಟೆ ಶಾಲೆಗೆ ಭೇಟಿ ನೀಡಿದ್ದರು. ಈ ವೇಳೆ ಶಾಲೆಗೆ ಬಂದಿದ್ದ ವಿಜಯ್ ಕುಮಾರ್ ಮತ್ತು ಅವರಣದಲ್ಲಿದ್ದ ಕೆಲ ಪೋಷಕರ ನಡುವೆ ಮಾತಿನ ಚಕಮಕಿ ನಡೆದಿದೆ.
‘ನಮ್ಮೂರ ಶಾಲೆಯಲ್ಲಿ ನಿಮಗೇನು ಕೆಲಸ. ನಮ್ಮೂರಿನ ಶಾಲೆಯ ಹೆಸರು ಕೆಡಿಸಲು ಬಂದಿದ್ದೀಯಾ, ಮಕ್ಕಳು ಶೌಚಾಲಯ ಸ್ವಚ್ಛ ಮಾಡುವಾಗ ನೀನೇಕೆ ವಿಡಿಯೊ ಮಾಡಿದೆ’ ಎಂದು ಪೋಷಕರು ಅವರನ್ನು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.