ADVERTISEMENT

ಆಲ್ದೂರು: ಕಾಡಾನೆ ತುಳಿದು ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 5 ಮೇ 2024, 8:16 IST
Last Updated 5 ಮೇ 2024, 8:16 IST
<div class="paragraphs"><p>ಆನಂದ ಪೂಜಾರಿ</p></div>

ಆನಂದ ಪೂಜಾರಿ

   

ಆಲ್ದೂರು (ಚಿಕ್ಕಮಗಳೂರು): ಕಾಡಾನೆ ದಾಳಿಗೆ ಜಿಲ್ಲೆಯಲ್ಲಿ ಮತ್ತೊಬ್ಬರು ಬಲಿಯಾಗಿದ್ದು, ಕಂಚಿನಕಲ್ ದುರ್ಗ ಸಮೀಪದ ಕೆಸವಿನಹಕ್ಲು ಎಸ್ಟೇಟ್‌ನಲ್ಲಿ ವ್ಯಕ್ತಿ ಮೃತಪಟ್ಟಿದ್ದಾರೆ.

ಎಸ್ಟೇಟ್‌ನಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಆನಂದ ಪೂಜಾರಿ(56) ಅವರು ಭಾನುವಾರ ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ಹೋಗುವಾಗ ಆನೆ ದಾಳಿ ನಡೆಸಿದೆ. ಮಂಗಳೂರಿನ ಆನಂದ ಪೂಜಾರಿ ಅವರು, 35 ವರ್ಷಗಳಿಂದ ಇದೇ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಪತ್ನಿ ಮತ್ತು ಮೂವರು ಮಕ್ಕಳಿದ್ದಾರೆ.

ADVERTISEMENT

ಒಂದು ವರ್ಷದ ಅವಧಿಯಲ್ಲಿ ‌‌ಕಾಡಾನೆ ದಾಳಿಗೆ ಮೂವರು ಬಲಿಯಾಗಿದ್ದಾರೆ. ಆನೆಗಳನ್ನು ಹಿಡಿದು ಸ್ಥಳಾಂತರ ಮಾಡಬೇಕು ಎಂದು ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.