ADVERTISEMENT

ಚಿಕ್ಕಮಗಳೂರು | ವಿದ್ಯುತ್ ಸ್ಪರ್ಶ: ಕಾಡಾನೆ ಸಾವು

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2024, 5:55 IST
Last Updated 27 ಆಗಸ್ಟ್ 2024, 5:55 IST
   

ಚಿಕ್ಕಮಗಳೂರು: ತಾಲ್ಲೂಕಿನ ಕೊಳಗಾಮೆ ಸಮೀಪ ವಿದ್ಯುತ್ ತಂತಿ ತಗಲಿ ಕಾಡಾನೆಯೊಂದು ಮಂಗಳವಾರ ಬೆಳಿಗ್ಗೆ ಮೃತಪಟ್ಟಿದೆ.

ಆಹಾರ ಹುಡುಕಿಕೊಂಡು ಬಂದಿದ್ದ ಆನೆ, ತೋಟದಲ್ಲಿ ಅಡಿಕೆ ಮರವೊಂದನ್ನು ಉರುಳಿಸಿದೆ. ಅದರ ಜತೆಗೆ ವಿದ್ಯುತ್ ತಂತಿ ನೆಲಕ್ಕೆ ಜಾರಿದೆ. ಅದು ಒಂಟಿ ಸಲಗಕ್ಕೆ ಸ್ಪರ್ಶಿಸಿ ಆನೆ ಸ್ಥಳದಲ್ಲೇ ಮೃತಪಟ್ಟಿದೆ.

ಆನೆಗೆ 50ರಿಂದ 60 ವರ್ಷ ವಯಸ್ಸಿರಬಹುದು. ಆಹಾರ ಹುಡುಕಿಕೊಂಡು ಬಂದಾಗ ಈ ಅವಘಡ ಸಂಭವಿಸಿದೆ ಎಂದು ಉಪಅರಣ್ಯ ಸಂರಕ್ಷಣಾಧಿಕಾರಿ ರಮೇಶ್‌ಬಾಬು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.