ADVERTISEMENT

ರವಿ ದಳವಾಯಿರಿಂದ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2024, 14:42 IST
Last Updated 18 ಅಕ್ಟೋಬರ್ 2024, 14:42 IST
ಕನ್ನಡ ಸಾಹಿತ್ಯ ಪರಿಷತ್‌ ತರೀಕೆರೆ ತಾಲ್ಲೂಕು ಘಟಕದ ಅಧ್ಯಕ್ಷ ರವಿ ದಳವಾಯಿ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು
ಕನ್ನಡ ಸಾಹಿತ್ಯ ಪರಿಷತ್‌ ತರೀಕೆರೆ ತಾಲ್ಲೂಕು ಘಟಕದ ಅಧ್ಯಕ್ಷ ರವಿ ದಳವಾಯಿ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು   

ತರೀಕೆರೆ: ಕನ್ನಡ ಸಾಹಿತ್ಯ ಪರಿಷತ್‌ ತಾಲ್ಲೂಕು ಘಟಕದ ಅಧ್ಯಕ್ಷ ರವಿ ದಳವಾಯಿ, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು.

ಅವರು, ಸ್ಥಳೀಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಭಾರ ತರಬೇತಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರತಿನಿಧಿಯಾಗಿ ನಾಮಪತ್ರ ಸಲ್ಲಿಸಿದರು.

ಸಂಸ್ಥೆಯ ಪ್ರಾಚಾರ್ಯ ಮಹಮದ್ ರೆಹಮತ್ ಉಲ್ಲಾ, ಕಚೇರಿ ಅಧೀಕ್ಷಕ ಚರಣ್ ಸಿಂಗ್, ಕಿರಿಯ ತರಬೇತಿ ಅಧಿಕಾರಿ ಪ್ರಸನ್ನ ಕುಮಾರ್ ಹಾಗೂ ಸುರೇಶ್ ಎಚ್., ಪ್ರಥಮ ದರ್ಜೆ ಸಹಾಯಕ ಕಡೂರು ಮೋಹನ್, ತರೀಕೆರೆ ತಾಲ್ಲೂಕು ಕನಕ ನೌಕರರ ಅಧ್ಯಕ್ಷ ಸಿ.ಎಸ್. ಬಸವರಾಜು, ಕಾರ್ಯದರ್ಶಿ ಎಸ್.ಟಿ.ತಿಪ್ಪೇಶಪ್ಪ, ತರೀಕೆರೆ ಶಿಕ್ಷಕರ ಸಂಘದ ನಿರ್ದೇಶಕ ಕುಮಾರ ಸ್ವಾಮಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.