ADVERTISEMENT

ನರಸಿಂಹರಾಜಪುರ: ಸಿಡಿಲು ಬಡಿದು 25 ಅಡಿಕೆ ಮರಕ್ಕೆ ಹಾನಿ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2024, 15:44 IST
Last Updated 20 ಏಪ್ರಿಲ್ 2024, 15:44 IST
ನರಸಿಂಹರಾಜಪುರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗಿನ ಜಾವ ಸುರಿದ ಗುಡುಗು ಸಹಿತ ಭಾರಿ ಗಾಳಿ ಮಳೆಗೆ ಈಚಿಕೆರೆ ಬಂಧನಮಕ್ಕಿ ನಿವಾಸಿ ವಸಂತ ಎಂಬುವರ ಅಡಿಕೆ ತೋಟಕ್ಕೆ ಸಿಡಿಲು ಬಡಿದ 25 ಮರಗಳಿಗೆ ಹಾನಿ ಸಂಭವಿಸಿದೆ
ನರಸಿಂಹರಾಜಪುರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗಿನ ಜಾವ ಸುರಿದ ಗುಡುಗು ಸಹಿತ ಭಾರಿ ಗಾಳಿ ಮಳೆಗೆ ಈಚಿಕೆರೆ ಬಂಧನಮಕ್ಕಿ ನಿವಾಸಿ ವಸಂತ ಎಂಬುವರ ಅಡಿಕೆ ತೋಟಕ್ಕೆ ಸಿಡಿಲು ಬಡಿದ 25 ಮರಗಳಿಗೆ ಹಾನಿ ಸಂಭವಿಸಿದೆ   

ನರಸಿಂಹರಾಜಪುರ: ತಾಲ್ಲೂಕಿನಲ್ಲಿ ಶನಿವಾರ ಬೆಳಗ್ಗಿನ ಜಾವ ಗುಡುಗು ಸಹಿತ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ.

ತಾಲ್ಲೂಕಿನ ಗುಬ್ಬಿಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈಚಿಕೆರೆಯ ಬಂಧನಮಕ್ಕಿ ನಿವಾಸಿ ವಸಂತ ಎಂಬುವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು 25 ಅಡಿಕೆ ಮರಗಳಿಗೆ ಹಾನಿ ಉಂಟಾಗಿದೆ. ಬಿ.ಎಚ್.ಕೈಮರದ ಸರ್ಕಾರಿ ಪ್ರಾಥಮಿಕ ಶಾಲೆಯ ತಡೆಗೋಡೆ ಕುಸಿದುಬಿದ್ದಿದೆ.

ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೆಂಕಟೇಶ್ ಎಂಬುವರ ಮನೆ ಮೇಲೆ ಮರಬಿದ್ದು ಹಾನಿ ಸಂಭವಿಸಿದೆ. ಸಿಂಸೆ ಗ್ರಾಮದ ಮಂಜುನಾಥ್ ಎಂಬುವರ ಮನೆ ಮೇಲೆ ಅಡಿಕೆ ಮರಬಿದ್ದು ಹಾನಿಯಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.