ಕೊಪ್ಪ: ಪಟ್ಟಣದ ವಾಟರ್ ಟ್ಯಾಂಕ್ ಸರ್ಕಲ್ ಬಳಿ ಸಿಕ್ಕಿದ್ದ ಪರ್ಸ್ವೊಂದನ್ನು ವಿದ್ಯಾರ್ಥಿ ಸ್ಥಳೀಯ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಇದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಂತ ಜೋಸೆಫ್ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಗುರುವಾರ ಸಂಜೆ ಶಾಲೆಯಿಂದ ಮನೆಗೆ ತೆರಳುವಾಗ ವಾಟರ್ ಟ್ಯಾಂಕ್ ಸರ್ಕಲ್ನಲ್ಲಿ ಹಣವಿರುವ ಪರ್ಸ್ ಸಿಕ್ಕಿದ್ದು, ಅದನ್ನು ಠಾಣೆಗೆ ಒಪ್ಪಿಸಿದ್ದಾನೆ. ಸಬ್ ಇನ್ಸ್ಪೆಕ್ಟರ್ ಬಸವರಾಜ್, ಎಎಸ್ಐ ಶ್ರೀಧರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.