ADVERTISEMENT

ಹಿರಿಯೂರು | ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿ; ಸಾವು

​ಪ್ರಜಾವಾಣಿ ವಾರ್ತೆ
Published 10 ಜನವರಿ 2024, 15:51 IST
Last Updated 10 ಜನವರಿ 2024, 15:51 IST
ಅಪಘಾತ–ಸಾಂಕೇತಿಕ ಚಿತ್ರ
ಅಪಘಾತ–ಸಾಂಕೇತಿಕ ಚಿತ್ರ   

ಹಿರಿಯೂರು: ಕಂಪನಿಯೊಂದರ ಬಿಡಿಭಾಗಗಳನ್ನು ಅಂಗಡಿಗಳಿಗೆ ನೀಡಲು ರಸ್ತೆ ಬದಿ ನಿಂತಿದ್ದ ಕಂಪನಿ ವ್ಯವಸ್ಥಾಪಕನಿಗೆ ಲಾರಿ ಡಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ಬುಧವಾರ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸ್ವಾಮಿಯಪ್ಪ ಹೋಟೆಲ್ ಸಮೀಪ ನಡೆದಿದೆ.

ಶಿವಮೊಗ್ಗ ತಾಲ್ಲೂಕಿನ ಹಾರೋಬೆನವಳ್ಳಿಯ ಮೇಘರಾಜ (29) ಮೃತ ವ್ಯಕ್ತಿ. ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.