ADVERTISEMENT

ಸಿರಿಗೆರೆ | ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲಿಯೇ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2024, 14:20 IST
Last Updated 31 ಮಾರ್ಚ್ 2024, 14:20 IST
ಸಿರಿಗೆರೆ ಸಮೀಪದ ಕುಂಬಾರ ಮಠದ ಬಳಿ ನಡೆದ ಅಪಘಾತದಲ್ಲಿ ಜಖಂಗೊಂಡಿರುವ ಕಾರು
ಸಿರಿಗೆರೆ ಸಮೀಪದ ಕುಂಬಾರ ಮಠದ ಬಳಿ ನಡೆದ ಅಪಘಾತದಲ್ಲಿ ಜಖಂಗೊಂಡಿರುವ ಕಾರು   

ಸಿರಿಗೆರೆ: ಲಕ್ಷ್ಮೀಸಾಗರ–ಕಾತ್ರಾಳು ಬಳ್ಳೇಕಟ್ಟೆ ಸಮೀಪದ ಕುಂಬಾರ ಮಠದ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಲಿಸುತ್ತಿದ್ದ ಲಾರಿಗೆ ಕಾರೊಂದು ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ, ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಕಾರಿನ ಚಾಲಕ ಚಲಿಸುತ್ತಿದ್ದ ಲಾರಿಯನ್ನು ಓವರ್‌ಟೇಕ್‌ ಮಾಡಲು ಹೋಗಿ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಕಾರಿನಲ್ಲಿದ್ದ ಇತರೆ ನಾಲ್ವರಿಗೆ ಗಾಯಗಳಾಗಿದ್ದು ಅವರನ್ನು ಚಿತ್ರದುರ್ಗ ಮತ್ತು ದಾವಣಗೆರೆ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಜಖಂಗೊಂಡಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲು ಸ್ಥಳೀಯರು ನೆರವಾಗಿದ್ದಾರೆ. ಭರಮಸಾಗರ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.