ADVERTISEMENT

ಪ್ರಿಯತಮೆ ಮೇಲೆ ಮಾರಣಾಂತಿಕ ಹಲ್ಲೆ: ಆರೋಪಿ ಪರಾರಿ

​ಪ್ರಜಾವಾಣಿ ವಾರ್ತೆ
Published 30 ಜನವರಿ 2024, 14:19 IST
Last Updated 30 ಜನವರಿ 2024, 14:19 IST
ಸಮೀಳಾ ಮತ್ತು ದಾದಾಪೀರ್‌
ಸಮೀಳಾ ಮತ್ತು ದಾದಾಪೀರ್‌   

ಭರಮಸಾಗರ: ಪ್ರಿಯತಮೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪ್ರಿಯಕರ ಪರಾರಿಯಾಗಿರುವ ಘಟನೆ ಸಮೀಪದ ಸುಲ್ತಾನಿಪುರ ಗ್ರಾಮದಲ್ಲಿ  ಸೋಮವಾರ ರಾತ್ರಿ ನಡೆದಿದೆ.

ಸಮೀನಾ ಹಲ್ಲೆಗೊಳಗಾದ ಯುವತಿ. ಮಚ್ಚಿನಿಂದ ಕುತ್ತಿಗೆ ಭಾಗಕ್ಕೆ ಹಲ್ಲೆ ಮಾಡಿ ಹತ್ಯೆಗೆ ಪ್ರಯತ್ನಿಸಿದ್ದ ಪ್ರಿಯಕರ ದಾದಾಪೀರ್‌ ಪರಾರಿಯಾಗಿದ್ದಾನೆ.

‘ಸಮೀಪದ ಸುಲ್ತಾನಿಪುರದಲ್ಲಿ ಶೆಡ್‌ವೊಂದನ್ನು ನಿರ್ಮಾಣ ಮಾಡಿಕೊಂಡು ಅದರಲ್ಲಿ ವಾಸ ಮಾಡುತ್ತಿದ್ದ ಈ ಜೋಡಿಯ ಮಧ್ಯೆ ಪದೇ ಪದೇ ಜಗಳ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಹಲ್ಲೆಯಿಂದ ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಮೀನಾಳನ್ನು ನೆರೆಯವರು ದಾವಣಗೆರೆ ಆಸ್ಪತ್ರೆಗೆ ದಾಖಲಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಭರಮಸಾಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.