ಚಳ್ಳಕೆರೆ: ಮನೆ ಛಾವಣಿ ಕುಸಿದು ಮಾಲೀಕ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ತಾಲ್ಲೂಕಿನ ರಾಮಜೋಗಿಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ರಾಮಜೋಗಿಹಳ್ಳಿ ಗ್ರಾಮದ ಮನೆ ಮಾಲೀಕ ಮುರಳೀಧರ (45) ಮೃತ ವ್ಯಕ್ತಿ.
ಹೊಸ ಮನೆ ನಿರ್ಮಾಣ ಕಾಮಗಾರಿಯ ವೇಳೆ ಹಳೆಯ ಮನೆ ಮೇಲೆ ಓಡಾಡುತ್ತಿರುವಾಗ ಈ ಅವಘಡ ಸಂಭವಿಸಿದೆ.
ಕಂದಾಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಾಗಿದೆ ಎಂದು ಪಿಎಸ್ಐ ಧರಪ್ಪ ಬಾಳಪ್ಪ ದೊಡ್ಡಮನಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.